ಪ್ರವೀಣ್ ಕುಟುಂಬಕ್ಕೆ ಬಿಜೆಪಿಯಿಂದ 5 ಲಕ್ಷ ರೂ.
ಉಡುಪಿ, ಆ.25: ಇತ್ತೀಚೆಗೆ ಸಂಘ ಪರಿವಾರದ ಕಾರ್ಯಕರ್ತರಿಂದ ಹತ್ಯೆಯಾದ ಬಿಜೆಪಿ ಕೆಂಜೂರು ಸ್ಥಾನೀಯ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಸಕ್ರೀಯ ಕಾರ್ಯಕರ್ತ ಪ್ರವೀಣ್ ಪೂಜಾರಿ ಕೆಂಜೂರು ಅವರ ಕುಟುಂಬಕ್ಕೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ಐದು ಲಕ್ಷ ರೂ.ಗಳ ಚೆಕ್ನ್ನು ಪ್ರವೀಣ್ ಹೆತ್ತವರಿಗೆ ಹಸ್ತಾಂತರಿಸಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್, ಬಿಜೆಪಿಯ ಜಿಲ್ಲಾ ಮುಖಂಡರಾದ ಕೆ.ಉದಯ ಕುಮಾರ್ ಶೆಟ್ಟಿ, ಬಿ.ರವಿ ಅಮೀನ್, ಯಶ್ಪಾಲ್ ಸುವರ್ಣ, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಟೆಟ್ಟು, ಬಿ.ಎನ್. ಶಂಕರ ಪೂಜಾರಿ, ಪ್ರತಾಪ್ ಹೆಗ್ಡೆ, ಶ್ರೀಶ ನಾಯಕ್ ಮುಂತಾದವರು ಉಪಸ್ಥಿತರಿದ್ದರು.
Next Story