ಬಂದ್ ದುಷ್ಪರಿಣಾಮಗಳ ಬಗ್ಗೆ ಚರ್ಚೆ: 8ರಂದು ಡಿಸಿ ಕಚೇರಿಯಲ್ಲಿ ಸಭೆ
ಮಂಗಳೂರು, ಜ.1: ಜಿಲ್ಲೆಯಲ್ಲಿ ನಡೆಯುವ ಏಕಾಏಕಿ ಬಂದ್ನಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಚರ್ಚಿಸಲು ಜ.8ರಂದು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರ ಸಭೆ ಯನ್ನು ಕರೆಯಲಾಗಿದೆ.
ಜಿಲ್ಲೆಯಲ್ಲಿ ಪದೇಪದೇ ಬಂದ್ಆಚರಿಸುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆ ಗಳಾಗುತ್ತಿದ್ದು, ಬಂದ್ನಂತಹ ಪ್ರತಿಭಟನೆಗಳಿಂದ ಜನರ ಹಿತ ಕಾಪಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಏಕಾಏಕಿ ಬಂದ್ಗೆ ಕರೆ ಕೊಡವುದರಿಂದ ಆಗುವ ದುಷ್ಪರಿ ಣಾಮಗಳ ಬಗ್ಗೆ ಚರ್ಚಿಸಲು ಈ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಧಿಕಾರಿ ಎ.ಬಿ.ಇಬ್ರಾಹೀಂ ತಿಳಿಸಿದ್ದಾರೆ.
Next Story