ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು
ಕಾಸರಗೋಡು, ಅ.28: ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಉದುಮ ಪನಾಯಲ್ ಪಾಕಂನ ರಾಘವನ್ ಎಂಬವರ ಪುತ್ರಿ ದೀಪಾಂಜಲಿ (21) ಮೃತಪಟ್ಟ ವಿದ್ಯಾರ್ಥಿನಿ.
ಈಕೆ ಕಾಞಂಗಾಡ್ನ ಕಾಲೇಜೊಂದರಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದಳು. ಬುಧವಾರ ಸಂಜೆ ಮನೆಯಲ್ಲಿದ್ದ ವೇಳೆ ಮೈ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದಳು. ಈಕೆಯ ಬೊಬ್ಬೆ ಕೇಳಿ ಓಡಿಬಂದಿದ್ದ ಸ್ಥಳೀಯರು ಗಂಭೀರ ಸ್ಥಿತಿಯಲ್ಲಿದ್ದ ದೀಪಾಂಜಲಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಆಕೆ ಮೃತಪಟ್ಟಿದ್ದಾಳೆ.
ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಬೇಡಡ್ಕ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story