ಶಿರಿಯಾರ ಪಿಡಿಒ ಅಮಾನತು: ಅಧ್ಯಕ್ಷೆ ಆದೇಶ
ಉಡುಪಿ, ನ.8: ಶಿರಿಯಾರ ಗ್ರಾಪಂನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣಪ ಮೊಗವೀರ ಸರಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ ಕರ್ತವ್ಯ ಲೋಪ ಎಸಗಿರುವ ಹಾಗೂ ಅವರ ಮೇಲೆ ಕೋಟ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿ ತನಿಖೆಯಲ್ಲಿರುವ ಹಿನ್ನೆಲೆ ಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿ ನಿಯಮ 1993 ಪ್ರಕರಣ 62(ಡಿ)ರ ಪ್ರಕಾರ ಪ್ರದತ್ತವಾದ ಅಧಿಕಾರದಂತೆ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ನೀಡಲಾಗಿದೆ ಎಂದು ಶಿರಿಯಾರ ಗ್ರಾಪಂ ಅಧ್ಯಕ್ಷೆ ಜ್ಯೋತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story