ಕರಾಳ ದಿನಾಚರಣೆ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಉಡುಪಿ, ನ.10: ಟಿಪ್ಪು ಜಯಂತಿ ಆಚರಣೆಯನ್ನು ವಿರೋಧಿಸಿ ಉಡುಪಿಯಲ್ಲಿ ಕರಾಳ ದಿನಾಚರಣೆ ನಡೆಸಲು ಮುಂದಾದ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಎದುರು ಪ್ರತಿಭಟನೆ ನಡೆಸಲು ಯತ್ನಿಸಿದ ಸಮಿತಿ ಹಾಗೂ ಸಂಘಪರಿವಾರದ ಮುಖಂಡರನ್ನು ಮತ್ತು ಬನ್ನಂಜೆ ತಾಲೂಕು ಕಚೇರಿಯ ಮುಂದೆ ಕರಾಳ ದಿನ ಆಚರಿಸಲು ಯತ್ನಿಸಿದ ಬಿಜೆಪಿ ಮುಖಂಡರನ್ನು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣು ವರ್ಧನ ನೇತೃತ್ವದಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡರು. ಇವರನ್ನು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕೇಂದ್ರದಲ್ಲಿರಿಸಿ ಟಿಪ್ಪು ಜಯಂತಿ ಕಾರ್ಯಕ್ರಮ ಮುಗಿದ ಬಳಿಕ ಬಿಡುಗಡೆಗೊಳಿಸಿದರು.
Next Story