ಕೆಎಸ್ಸಾರ್ಟಿಸಿಯ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸಿಐಟಿಯು ಧರಣಿ
ಕಾಸರಗೋಡು, ನ.11: ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆ ( ಸಿಐಟಿಯು ) ವತಿಯಿಂದ ಕಾಸರಗೋಡು ಕೆಎಸ್ಸಾರ್ಟಿಸಿ ಬಸ್ ಡಿಪೊ ಮುಂಭಾಗದಲ್ಲಿ ಧರಣಿ ನಡೆಯಿತು.
ಧರಣಿಯನ್ನು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಮೋಹನ್ ಕುಮಾರ್ ಪಾಡಿ ಉದ್ಘಾಟಿಸಿದರು. ಕೆ. ಕುಂಞಿರಾಮನ್ ಅಧ್ಯಕ್ಷತೆ ವಹಿಸಿದ್ದರು. ಕೆ.ಗಣೇಶ್, ವಿ.ರತೀಶ್, ಪಿ. ಕುಂಞಿರಾಮನ್ , ಕೆ.ಎಂ. ಬಾಲಕೃಷ್ಣನ್, ಕೆ.ಪಿ. ಶೈಜು ಮೊದಲಾದವರು ಉಪಸ್ಥಿತರಿದ್ದರು.
Next Story