ಉಡುಪಿ ಎಸ್ಎಸ್ಎಫ್ ನಿಂದ ಭಾವೈಕ್ಯತಾ ಸಮಾವೇಶ
ಉಡುಪಿ : ಪ್ರವಾದಿ ಮಹಮ್ಮದ್ ಪೈಗಂಬರ್ ರವರ ಜನ್ಮ ಮಾಸಾಚರಣೆ ಪ್ರಯುಕ್ತ " ಸ್ನೇಹ ಸಮಾಜದ ಸೃಷ್ಟಿಗಾಗಿ" ಎಂಬ ಧ್ಯೇಯವಾಕ್ಯದೊಂದಿಗೆ ಸಂದೇಶ ಜಾಥ ಮತ್ತು ಭಾವೈಕ್ಯತಾ ಸಮಾವೇಶ ವನ್ನು ಉಡುಪಿ ಸಿಟಿ ಬಸ್ ನಿಲ್ದಾಣ ಬಳಿ ಹಮ್ಮಿಕೊಳ್ಳಲಾಗಿತ್ತು. ಸಯ್ಯದ್ ಜಅ್ ಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರರವರ ಪ್ರಾಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಎಸ್ಎಫ್ ಉಡುಪಿ ಜಿಲ್ಲಾಧ್ಯಕ್ಷ ಅಶ್ರಫ್ ರಝಾ ಅಂಜದಿ ವಹಿಸಿದ್ದರು . ಕಾರ್ಯಕ್ರಮದಲ್ಲಿ ಎಂಎಸ್ ಎಂ ಅಬ್ದುರ್ರಶೀದ್ ಝೈನಿ ಅಲ್ ಕಾಮಿಲ್ ಸಖಾಫಿ , ಶಾಸಕ ಪ್ರಮೋದ್ ಮಧ್ವರಾಜ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು .
Next Story