ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು
ಕುಂದಾಪುರ, ಡಿ.6: ಗೂಡ್ಸ್ ವಾಹನವೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ಅಂಕದಕಟ್ಟೆಯ ಸರ್ಜನ್ ಆಸ್ಪತ್ರೆಯ ಎದುರು ಡಿ.5 ರಂದು ರಾತ್ರಿ 11:30ರ ಸುಮಾರಿಗೆ ನಡೆದಿದೆ.
ಮೃತರನ್ನು ಅಂಪಾರು ಮೂಡುಬಗೆ ನಿವಾಸಿ ಶಂಭು ಶೆಟ್ಟಿ ಎಂಬವರ ಮಗ ಸಂದೀಪ ಶೆಟ್ಟಿ(22) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಸುಭಾಷ್ ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿದ್ಕಲ್ಕಟ್ಟೆ ಐಟಿಐನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಸಂದೀಪ ಶೆಟ್ಟಿ ರಾತ್ರಿ ಕುಂದಾಪುರ ಹೊಟೇಲ್ನಲ್ಲಿ ಪಾರ್ಟ್ ಟೈಮ್ ಕೆಲಸ ನಿರ್ವಹಿಸುತ್ತಿದ್ದರು. ಸೋಮವಾರ ಕೆಲಸ ಮುಗಿಸಿ ಬೈಕ್ನಲ್ಲಿ ಮನೆಗೆ ಬರುತ್ತಿದ್ದಾಗ, ಹಿಂದಿನಿಂದ ಬಂದ ಗೂಡ್ಸ್ ವಾಹನ ಬೈಕ್ಗೆ ಢಿಕ್ಕಿ ಹೊಡೆದು ಪರಾರಿಯಾಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಹಿಂಬದಿ ಸವಾರ ಸಂದೀಪ್ ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story