ಉಡುಪಿ ಜಿಲ್ಲಾ ಕ್ರೀಡಾಪಟುಗಳಿಂದ ಸಾಧನೆ
ಉಡುಪಿ, ಡಿ.16: ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ಜಿಲ್ಲಾ ಕ್ರೀಡಾ ವಸತಿ ನಿಲಯದ ಕ್ರೀಡಾಪಟು ಗಳು ಇತ್ತೀಚೆಗೆ ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ ನಡೆದ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 8 ಚಿನ್ನ, 8 ಬೆಳ್ಳಿ, 11 ಕಂಚಿನ ಪದಕಗಳನ್ನು ಜಯಿಸಿದ್ದಾರೆ.
ಅಲ್ಲದೇ ಇತ್ತೀಚೆಗೆ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆದ ಕಿರಿಯರ ರಾಷ್ಟ್ರೀಯ ಕ್ರೀಡಾಕೂಟದಲ್ಲೂ ಇವರು 2 ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಶಾಲಾ ಕ್ರೀಡಾಕೂಟದಲ್ಲಿ ತಾಲೂಕು ಮಟ್ಟದಿಂದ ರಾಜ್ಯಮಟ್ಟದವರೆಗೆ ಭಾಗವಹಿಸಿ ಒಟ್ಟು 42 ಚಿನ್ನ, 25 ಬೆಳ್ಳಿ, 12 ಕಂಚು, 6 ವೀರಗ್ರಾಣಿ ಪ್ರಶಸ್ತಿ ಹಾಗೂ ಸಮಗ್ರ ಪ್ರಶಸ್ತಿಯನ್ನು ಈ ತಂಡ ಪಡೆದಿೆ ಎಂದು ಇಲಾಖೆಯ ತಿಳಿಸಿದೆ.
ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆದ ಕಿರಿಯರ ರಾಷ್ಟ್ರೀಯ ಕ್ರೀಡಾಕೂಟದಲ್ಲೂ ಇವರು 2 ಬೆಳ್ಳಿಪದಕಗಳನ್ನು ಪಡೆದಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಶಾಲಾ ಕ್ರೀಡಾಕೂಟದಲ್ಲಿ ತಾಲೂಕುಮಟ್ಟದಿಂದ ರಾಜ್ಯಮಟ್ಟದವರೆಗೆ ಭಾಗವಹಿಸಿ ಒಟ್ಟು 42 ಚಿನ್ನ, 25 ಬೆಳ್ಳಿ, 12 ಕಂಚು, 6 ವೀರಗ್ರಾಣಿ ಪ್ರಶಸ್ತಿ ಹಾಗೂ ಸಮಗ್ರ ಪ್ರಶಸ್ತಿಯನ್ನು ಈ ತಂಡ ಪಡೆದಿದೆ ಎಂದು ಇಲಾಖೆಯ ತಿಳಿಸಿದೆ.
ಚಿತ್ರದಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಅಥ್ಲೆಟಿಕ್ಸ್ ತರಬೇತುದಾರ ಅನಂತ್ರಾಮ್ ಕೆ. ಕ್ಷೇಮಪಾಲಕರಾದ ಮನೋಜ್ ಕುಮಾರ್ ಹಾಗೂ ಪುಣೆಯಲ್ಲಿ ನಡೆಯುವ ರಾಷ್ಟ್ರೀಯ ಶಾಲಾ ಕ್ರೀಡಾಕೂಟಕ್ಕೆ ಆಯ್ಕೆಯಾದ ಪ್ರಶಾಂತ್ ಕೆ.ಆರ್, ಅಭಿಷೇಕ್ ವ್ಹಾಣ್ ಹಾಗೂ ಪ್ರಜ್ಞಾ ಕೆ. ಇದ್ದಾರೆ.