ಡಾ.ಸದಾನಂದ ಪೆರ್ಲರಿಗೆ ‘ವಿಶ್ವೇಶ್ವರಯ್ಯ ಸಾಹಿತ್ಯ ಪ್ರಶಸ್ತಿ’ ಪ್ರದಾನ
ಮಂಗಳೂರು, ಡಿ.18: ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಡಾ. ಸದಾನಂದ ಪೆರ್ಲ ಅವರಿಗೆ ಬೆಂಗಳೂರಿನ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಷ್ಠಾನವು ಬೆಳ್ಳಿ ಹಬ್ಬದ ಪ್ರಯುಕ್ತ ರಾಜ್ಯಮಟ್ಟದ ವಿಶ್ವೇಶ್ವರಯ್ಯ ಸಾಹಿತ್ಯ ಪ್ರಶಸ್ತಿಯನ್ನು ಇತ್ತೀಚೆಗೆ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದ ಪುಲಕೇಶಿ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನಿಸಿತು.
ರಾಜ್ಯದ ಮಾಜಿ ಸಚಿವ ರಾಮಚಂದ್ರಗೌಡ ಮತ್ತು ಪ್ರತಿಷ್ಠಾನದ ಅಧ್ಯಕ್ಷ ರಮೇಶ ಸುರ್ವೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭ ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ 8ನೆ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಚೆನ್ನಣ್ಣ ವಾಲೀಕಾರ, ಅಥಣಿ ಶಿವಯೋಗೀಶ್ವರ ಸ್ವಾಮೀಜಿ, ಚಂದ್ರಕಾಂತ ಬೆಲ್ಲದ ಮತ್ತಿತರರು ಹಾಜರಿದ್ದರು.
Next Story