ಮರಳುಗಾರಿಕೆ: ಹಸಿರುಪೀಠದಿಂದ ವಾರದೊಳಗೆ ತೀರ್ಪು ನಿರೀಕ್ಷೆ
ಉಡುಪಿ, ಜ.6: ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ (ಸಿಆರ್ಝಡ್) ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಚೆನ್ನೆ ಹಸಿರು ಪೀಠ ಹೊರಡಿಸಿರುವ ತಡೆಯಾಜ್ಞೆ ತೆರವುಗೊಳಿಸಲು ಸಲ್ಲಿಸಲಾದ ಅರ್ಜಿಗೆ ಸಂಬಂಸಿದಂತೆ ನಡೆದ ವಿಚಾರಣೆಯ ವಾದ-ಪ್ರತಿವಾದಗಳು ಗುರುವಾರ ಮುಕ್ತಾಯಗೊಂಡಿದ್ದು, ವಾರದೊಳಗೆ ನ್ಯಾಯಾಲಯ ತೀರ್ಪು ಪ್ರಕಟಿಸುವ ನಿರೀಕ್ಷೆಯಿದೆ. ಚೆನ್ನೆನ ಹಸಿರು ಪೀಠದಲ್ಲಿ ಉಡುಪಿ ಜಿಲ್ಲಾ ಹೊಯ್ಗೆ ದೋಣಿ ಕಾರ್ಮಿಕರ ಸಂಘ ಮರಳುಗಾರಿಕೆ ನಿಷೇಧ ತೆರವುಗೊಳಿಸುವಂತೆ ಕೋರಿ ಅರ್ಜಿಯನ್ನು ಸಲ್ಲಿಸಿದೆ.
ಅರ್ಜಿದಾರರ ಪರ ವಕೀಲರಾದ ರಂಜನ್ ಶೆಟ್ಟಿ ನಿನ್ನೆ ತಮ್ಮ ವಾದ ಮಂಡಿಸಿದ್ದರು. ಎಲ್ಲರ ವಾದ-ಪ್ರತಿವಾದಗಳನ್ನು ಆಲಿಸಿರುವ ನ್ಯಾಯಮೂರ್ತಿ ನಂಬಿಯಾರ್ ಅವರ ಏಕಸದಸ್ಯ ಪೀಠ ಶೀಘ್ರವೇ ತೀರ್ಪು ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.
ಅಕ್ರಮ ಮರಳುಗಾರಿಕೆಯಿಂದ ಉಡುಪಿ ತಾಲೂಕಿನ ಬೈಕಾಡಿ, ಹಾರಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಜನತೆಗೆ ಉಂಟಾದ ಸಮಸ್ಯೆಗಳಿಗೆ ಸರಕಾರ, ಇಲಾಖೆಗಳಿಂದ ಯಾವುದೇ ಪರಿಹಾರ ಸಿಗದಾಗ ಬೈಕಾಡಿಯ ಉದಯ ಸುವರ್ಣ ನೇತೃತ್ವದಲ್ಲಿ ಗ್ರಾಮಸ್ಥರು ಹಸಿರು ಪೀಠಕ್ಕೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದ್ದು, ಕಳೆದ ಮೇ.17ರಿಂದ ಹಸಿರು ಪೀಠ ಮರಳುಗಾರಿಕೆಗೆ ತಡೆಯಾಜ್ಞೆ ವಿಸಿದೆ.