ಬಸ್ ಢಿಕ್ಕಿ: ವಲಸೆ ಕಾರ್ಮಿಕ ಮೃತ್ಯು
ಉಡುಪಿ, ಜ.9: ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗಿನ ಜಾವ 5:30ರ ಸುಮಾರಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವಲಸೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನಾಗರಾಜ ಎಂದು ಗುರುತಿಸಲಾಗಿದೆ. ಇವರು ತನ್ನ ಊರಿನವರೊಂದಿಗೆ ಚಳ್ಳಕೆರೆಯಿಂದ ಜ.8ರಂದು ಉಡುಪಿಗೆ ಹೊರಟಿದ್ದು, ಇಂದು ಬೆಳಗ್ಗಿನ ಜಾವ ಉಡುಪಿಗೆ ತಲುಪಿದ್ದರು. ಂತೆಕಟ್ಟೆಯಲ್ಲಿ ಬಸ್ಸಿನಿಂದ ಇಳಿದ ಇವರು ಹೆದ್ದಾರಿಯನ್ನು ದಾಟುತ್ತಿದ್ದಾಗ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕೆನರಾ ಟೂರಿಸ್ಟ್ ಬಸ್ ಇವರಿಗೆ ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story