ದಲಿತ ನಿಂದನೆ ಪ್ರಕರಣ: ಆರೋಪಿಗಳಿಗೆ ಜಾಮೀನು
ಪುತ್ತೂರು, ಫೆ.11: ಪಜಿರೋಡಿ ದಲಿತ ಕಾಲನಿ ನಿವಾಸಿ ದಿವಾಕರ ಮುಗೇರ ಎಂಬವರಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಒಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳಿಗೆ ಮಂಗಳೂರು ನ್ಯಾಯಾಲಯ ಜಾಮೀನು ನೀಡಿದೆ. ಪುತ್ತೂರು ತಾಲೂಕಿನ ಶಾಂತಿಗೋಡು ನಿವಾಸಿ ಸುಧಾಕರ ಭಟ್ ಕಲ್ಕರ್ ಮತ್ತು ಕಿಶೋರ್ ಸರೋಳಿ ಎಂಬವರು ಜಾಮೀನು ಪಡೆದುಕೊಂಡ ಆರೋಪಿಗಳು. ಇವರ ಮೇಲೆ ದಲಿತ ನಿಂದನೆ ಮತ್ತು ಕೊಲೆ ಬೆದರಿಕೆ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಗಳ ಪರವಾಗಿ ವಕೀಲರಾದ ಮಹೇಶ್ ಕಜೆ ಮತ್ತು ರಾಜೇಶ್ ರೈ ವಾದಿಸಿದ್ದರು.
Next Story