ಕೃಷ್ಣಾಪುರ 7ನೆ ಬ್ಲಾಕ್: ಶಾಲಾ ನೂತನ ಕಟ್ಟಡಕ್ಕೆ ಶಿಲಾನ್ಯಾಸ
ಸುರತ್ಕಲ್, ಮೇ 8: ಕೃಷ್ಣಾಪುರ 7ನೆ ಬ್ಲಾಕ್ನ ಸರಕಾರಿ ಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಮೇಯರ್ ಕವಿತಾ ಸನಿಲ್ ಹಾಗೂ ಶಾಸಕ ಮೊಯ್ದಿನ್ ಬಾವಾ ಸೋಮವಾರ ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕ ಮೊಯ್ದಿನ್ ಬಾವ, 45 ಲಕ್ಷ ರೂ. ವೆಚ್ಚದಲ್ಲಿ ನೂತನ ಸರಕಾರಿ ಶಾಲೆ ಹಾಗೂ 6 ಕೋ.ರೂ. ವೆಚ್ಚದಲ್ಲಿ ಉತ್ಕೃಷ್ಟಗುಣಮಟ್ಟದ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ಶಾಲೆಯ ಕಟ್ಟಡ ಕಾಮಗಾರಿಗೆ ಆಂಗ್ಲೋ ಇಂಡಿಯನ್ ಪ್ರಜೆಯೊಬ್ಬರ 12 ಲಕ್ಷ ರೂ., ಎಂಆರ್ಪಿಎಲ್ನ 20 ಲಕ್ಷ ರೂ. ಮತ್ತು ಉಳಿದ ನಿಧಿಯನ್ನು ಶಾಸಕರ ನಿಧಿಯಿಂದ ಭರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಉಪ ಮೇಯರ್ ರಜನೀಶ್, ಮನಪಾ ನಗರ ಯೋಜನೆ ಮತ್ತು ಅಭಿವೃದ್ಧಿ ಯೋಜನೆ ಸಮಿತಿಯ ಅಧ್ಯಕ್ಷ ಅಬ್ದುಲ್ ರವೂಫ್, ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿಯ ಅಧ್ಯಕ್ಷೆ ಪ್ರತಿಭಾ ಕುಳಾಯಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷೆ ನಾಗವೇಣಿ, ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷೆ ಸಬಿತಾ ಮಿಸ್ಕಿತ್, ಮನಪಾ ಮುಖ್ಯ ಸಚೇತಕ ಶಶಿಧರ ಎಂ. ಹಗ್ಡೆ, ಮನಪಾ ಸದಸ್ಯ ಅಯಾಝ್, ಮನಪಾ ಕಮಿಷನರ್, ಟ್ರಾಫಿಕ್ ವಿಭಾಗದ ವೃತ್ತ ನಿರೀಕ್ಷಕ ಮಂಜುನಾಥ್ ಸೇರಿದಂತೆ ಮನಪಾ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.