ಅಂಬೇಡ್ಕರ್ ನಿವಾಸ್ ಯೋಜನೆಗೆ ಅರ್ಜಿ ಆಹ್ವಾನ
ಉಡುಪಿ, ಮೇ 19: ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮವು 2017-18ನೆ ಸಾಲಿಗೆ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಸತಿ ರಹಿತರಿಗೆ ಮನೆ ನಿರ್ಮಿಸಲು ಸಹಾಯ ಧನ ಒದಗಿಸಲಿದ್ದಾರೆ.
ಸಾಲಿಗ್ರಾಮ ಪಪಂ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವ ವಸತಿ ರಹಿತ ಅರ್ಹ ಪ.ಜಾತಿ ಮತ್ತು ಪ.ಪಂಗಡಗಳ ಕುಟುಂಬಗಳಿಗೆ ಡಾ.ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಡಿಯಲ್ಲಿ ಬೇಡಿಕೆ ಮೇಲೆ ಮನೆ ನೀಡುವ ಪದ್ಧತಿಗೆ ಚಾಲನೆ ನೀಡಲಾಗಿದೆ.ಅರ್ಹ ಪ.ಜಾತಿ ಮತ್ತು ಪ.ಪಂಗಡಗಳ ಫಲಾನು ಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಈಗಾಗಲೇ ಅರ್ಜಿ ಸಲ್ಲಿಸಿದವರು ಅರ್ಜಿ ನೀಡುವ ಅಗತ್ಯವಿರುವುದಿಲ್ಲ ಎಂದು ಸಾಲಿಗ್ರಾಮ ಪಪಂ ಪ್ರಕಟನೆ ತಿಳಿಸಿದೆ.
Next Story