ಬಾವಿಗೆ ಬಿದ್ದು ಯುವತಿ ಮೃತ್ಯು
ಶಂಕರನಾರಾಯಣ, ಜೂ.21: ಉಳ್ಳೂರು ಗ್ರಾಮದ ಮಣಿಮಕ್ಕಿ ಎಂಬಲ್ಲಿ ಯುವತಿಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಘಟನೆ ಜೂ.20ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಮಣಿಮಕ್ಕಿಯ ರಾಘು ಪೂಜಾರಿ ಎಂಬವರ ಮಗಳು ಗಂಗಾ (19) ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪದ ಆವರಣ ಇಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರಬಹುದು ಅಥವಾ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಶಂಕರನಾರಾ ಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story