ದ.ಕ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ನಿಷೇಧಾಜ್ಞೆ ಮತ್ತೆ ಮುಂದುವರಿಕೆ
ಮಂಗಳೂರು, ಜೂ.30: ದ.ಕ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಕಳೆದ ಒಂದು ತಿಂಗಳಿನಿಂದ ನಿರಂತರವಾಗಿರುವ ನಿಷೇಧಾಜ್ಞೆಯನ್ನು ಇನ್ನೆರಡು ದಿನಗಳಿಗೆ ವಿಸ್ತರಿಸಲಾಗಿದೆ.
ಜಿಲ್ಲೆಯ ಕೆಲವೆಡೆ ಅಹಿತಕರ ಘಟನೆಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆಯನ್ನು ಜುಲೈ 2ರವರೆಗೆ ಮುಂದುವರಿಸಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಜೂ.27ರವರೆಗೆ ಇದ್ದ ನಿಷೇಧಾಜ್ಞೆಯನ್ನು ಜೂ.30ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಇದೀಗ ಅದನ್ನು ಮತ್ತೆ ವಿಸ್ತರಿಸಲಾಗಿದೆ.
Next Story