ನವೀನ್ ಡಿಸೋಜ ನೇಮಕ
ಮಂಗಳೂರು, ಜು.17: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯ ಅನುಮೋದನೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ರ ಶಿಫಾರಸ್ಸಿನ ಮೇರೆಗೆ ಕಾರ್ಪೊರೇಟರ್ ನವೀನ್ ಡಿಸೋಜರನ್ನು ಕೆಪಿಸಿಸಿ ಕಾರ್ಯದರ್ಶಿಯನ್ನಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸತತ ಮೂರು ಅವಧಿಗೆ ಮನಪಾ ಸದಸ್ಯರಾಗಿ, ಒಂದು ಅವಧಿಗೆ ಮನಪಾ ತೆರಿಗೆ ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ನವೀನ್ ಆರ್ ಡಿಸೋಜ ಈ ಹಿಂದೆ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಮತ್ತು ರಾಜ್ಯ ಯುವ ಕಾಂಗ್ರೆಸ್ನ ಕಾರ್ಯದರ್ಶಿಯಾಗಿ, ಯುವ ಕಾಂಗ್ರೆಸ್ ಟಾಸ್ಕ್ಪೋರ್ಸ್ನ ಸದಸ್ಯರಾಗಿ ಒರಿಸ್ಸಾ, ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವ ನೋಂದಾವಣೆ ಸಮಿತಿಯ ಹೊಣೆಗಾರಿಕೆಯನ್ನು ನಿಭಾಯಿಸಿದ್ದರು.
Next Story