ಬಹುಮಾನ ಹಣ; ಅವಧಿ ವಿಸ್ತರಣೆ
ಉಡುಪಿ, ಆ.2: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2017- 18ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ, ಪಾಲಿಟೆಕ್ನಿಕ್, ಡಿಪ್ಲೋಮಾ, ಪದವಿ, ಬಿಎಡ್, ಬಿಪಿಎಡ್, ಸ್ನಾತಕೋತ್ತರ ಪದವಿ, ಎಂಎಡ್, ಎಂಪಿಎಡ್, ಕೃಷಿ, ಪಶುಸಂಗೋಪನೆ, ಇಂಜಿನಿಯರಿಂಗ್ ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿ ಸಿದಂತೆ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರು ಮಾಡುವ ಸಲುವಾಗಿ ಪ್ರಸಕ್ತ ಸಾಲಿನಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಇಲಾಖೆಯ ವೆಬ್ಸೈಟ್ -www.sw.kar.nic.in- ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿಯವರಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನವನ್ನು ಆ.14ರವರೆಗೆ ವಿಸ್ತರಿಸಲಾಗಿದ್ದು, ಇತರೆ ಕೋರ್ಸುಗಳಿಗೆ ಸೆ. 30 ಕೊನೆಯ ದಿನಾಂಕವಾಗಿರುತ್ತದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಕಾಲೇಜಿನ ಪ್ರಾಶುಪಾಲರಿಂದ ದೃಢೀಕರಿಸಿ ಸಮಾಜ ಕಲ್ಯಾಣ ಇಲಾಖೆಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2574892ನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.