Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬದುಕಿನಲ್ಲಿ ಸತ್ಯನಿಷ್ಠರಾಗಿರುವುದು...

ಬದುಕಿನಲ್ಲಿ ಸತ್ಯನಿಷ್ಠರಾಗಿರುವುದು ಹೆಚ್ಚು ಮೌಲ್ಯಯುತ: ವಿನಯ ಹೆಗ್ಡೆ

ಆಳ್ವಾಸ್‌ನಲ್ಲಿ ಸ್ವಾತಂತ್ರ್ಯೋತ್ಸವ

ವಾರ್ತಾಭಾರತಿವಾರ್ತಾಭಾರತಿ15 Aug 2017 4:30 PM IST
share
ಬದುಕಿನಲ್ಲಿ ಸತ್ಯನಿಷ್ಠರಾಗಿರುವುದು ಹೆಚ್ಚು ಮೌಲ್ಯಯುತ: ವಿನಯ ಹೆಗ್ಡೆ

ಮೂಡುಬಿದಿರೆ, ಆ.15: ಸತ್ಯ ಪ್ರಾಮಾಣಿಕತೆಗಳು ಎಂದಿಗೂ ತಮ್ಮ ಬೆಲೆ ಕಳೆದುಕೊಳ್ಳುವುದಿಲ್ಲ. ಅವು ಹೆಚ್ಚು ಮೌಲ್ಯಯುತ ಸಂಗತಿಗಳಾಗಿವೆ. ಎಂದಿಗೂ ಸತ್ಯವೇ ಜಯಿಸುತ್ತದೆ. ವಿದ್ಯಾರ್ಥಿಗಳು ತಮ್ಮ ವೈಯುಕ್ತಿಕ ಜೀವನದಲ್ಲಿ ಅಳವಡಿಸಿಕೊಳ್ಳಬಹುದಾದ ಗರಿಷ್ಠ ಮೌಲ್ಯವೆಂದರೆ ಅದು ಸತ್ಯನಿಷ್ಠೆಯಾಗಿದೆ. ನಮ್ಮ ದೇಶ ನಮಗೆ ಪೂಜನೀಯ, ಮಾತೃ ಸಮಾನ. ಸರ್ವ ಜನಾಂಗಕ್ಕೂ ಇಲ್ಲಿ ಬಾಳ್ವೆಗೆ ಸಮಾನ ಹಕ್ಕುಗಳಿವೆ. ಸಂವಿಧಾನವು ಮೂಲಭೂತವಾಗಿ ನಾಲ್ಕು ಪ್ರಧಾನ ಸ್ಥಂಭಗಳನ್ನು ಹೊಂದಿದ್ದು, ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಮತ್ತು ಪತ್ರಿಕಾರಂಗಗಳು ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಪ್ರಾಮುಖ್ಯತೆಯನ್ನು ಹೊಂದಿವೆ. ವಿದ್ಯಾರ್ಥಿಗಳು ದೇಶ ಹಾಗೂ ಸಮಾಜದಿಂದ ಪಡೆದುಕೊಂಡದ್ದನ್ನು ಮತ್ತೆ ಸಮಾಜಕ್ಕಾಗಿ ಧಾರೆಯೆರೆಯಬೇಕು ಹಾಗೂ ಇನ್ನೊಬ್ಬರೊಂದಿಗೆ ಹಂಚಿಕೊಳ್ಳಬೇಕು ಎಂದು ನಿಟ್ಟೆ ವಿದ್ಯಾ ಸಂಸ್ಥೆ ಅಧ್ಯಕ್ಷ ಎನ್.ವಿನಯ ಹೆಗ್ಡೆ ಹೇಳಿದರು.

ಅವರು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿಯಲ್ಲಿ ಏರ್ಪಡಿಸಲಾಗಿದ್ದ  ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ವಿದ್ಯೆಯೆಂಬುದು ಕಠಿಣ ಪರಿಶ್ರಮದಿಂದ ಸಾಧಿಸಬಹುದಾದ ವ್ಯಕ್ತಿಯೊಬ್ಬನ ಜೀವನದ ಬಹುದೊಡ್ಡ ಯಶಸ್ಸು. ಶಿಕ್ಷಿತ ವರ್ಗದಿಂದ ದೇಶದ ಸಾಮಾಜಿಕ ವ್ಯವಸ್ಥೆಯಲ್ಲಿ ಸದಭಿರುಚಿಯ ಬೆಳವಣಿಗೆಯನ್ನು ನಿರೀಕ್ಷಿಸಬಹುದು. ವಿದ್ಯಾರ್ಥಿಗಳು ಒಳ್ಳೆಯ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಸಂಗ್ರಾಮದ ಉದ್ದೇಶಗಳನ್ನು ನೈಜ ದಿಶೆಯಲ್ಲಿ ಸಾರ್ಥಕಗೊಳಿಸುತ್ತಾ, ದೇಶ ಭಕ್ತಿಯನ್ನು ನಾವು ಅಳವಡಿಸಿಕೊಳ್ಳುವ ಜೊತೆಗೆ ಮುಂದಿನ ಜನಾಂಗಕ್ಕೆ ಅದರ ಮಹತ್ವವನ್ನು ತಿಳಿಸಿಕೊಡಬೇಕು ಎಂದರು.

ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ರ್ಯಾಂಕ್ ಪಡೆದ ನಂದಿನಿ ಕೆ.ಆರ್. ಸಂಸ್ಥೆಯ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ ದೀರ್ಘ ಕಾಲದ ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಫಲವಾಗಿ ನಾವು ಇಂದು ಸಂಭ್ರಮದಿಂದ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ನಾವು ಎಷ್ಟೇ ಸಾಧನೆಗಳನ್ನು ಮಾಡಿದರೂ ಅದು ಸಮಾಜದಿಂದ ಪಡೆದ ಸಾಲವಾಗಿರುತ್ತದೆ. ಅದನ್ನು ಹಿಂತಿರುಗಿಸುವುದು ನಮ್ಮ ಕರ್ತವ್ಯವೆಂದು ಭಾವಿಸಬೇಕು. ವಿದ್ಯಾರ್ಥಿಗಳು ಸಮಾಜದ ಅಮೂಲ್ಯ ಸ್ವತ್ತುಗಳಾಗುವತ್ತ ಗಮನ ಹರಿಸಬೇಕು ಎಂದ ಅವರು ದೇಶ ವಿಭಜನೆಯ ಸಂದರ್ಭ ಸಮಾಜದಲ್ಲಾಗುತ್ತಿದ್ದ ಬದಲಾವಣೆಯ ಕುರಿತು ರವೀಂದ್ರನಾಥ್ ಠಾಗೋರರು ಕವನದ ಮೂಲಕ ನೀಡಿದ ಪ್ರತಿಕ್ರಿಯನ್ನು ಓದಿ ಹೇಳಿದರು.

ದೇಶದ ವಿವಿದೆಡೆಗಳಲ್ಲಿ ಸನ್ಮಾನಗಳನ್ನು ತಾನು ಸ್ವೀಕರಿಸಿದ್ದು, ಆದರೆ ನಾನು ಕಲಿತ ಕಾಲೇಜಿನಲ್ಲಿ ನನಗೆ ನೀಡಲಾದ ಈ ಗೌರವವು ನನ್ನ ಸಂತಸ ತಂದಿದೆ ಎಂದರು.

ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್, ಅಬುದಾಬಿಯ ಎನ್‌ಎಂಸಿ, ಯುಎಇ ಎಕ್ಸ್‌ಚೆಂಜ್ ಸಂಸ್ಥೆಗಳ ಸಿಇಒ ಡಾ.ಬಿ.ಆರ್ ಶೆಟ್ಟಿ, ಮಾಜಿ ಸಚಿವ ಅಮರನಾಥ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ. ಮೋಹನ ಆಳ್ವ, ಇಂಜಿನಿಯರಿಂಗ್ ಕಾಲೇಜು ಮುಖ್ಯಸ್ಥ ವಿವೇಕ್ ಆಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದ ನಂದಿನಿ ಕೆ.ಆರ್, ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಸ್ಥಾನ ಪಡೆದ ವಿ. ಸ್ಪಂದನ, ಸಿಎ-ಸಿಪಿಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ, ದೇಶಕ್ಕೆ ದ್ವಿತೀಯ ಸ್ಥಾನ ಪಡೆದ ತವಿಷಿ ದೇಚಮ್ಮ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X