ಡಾ.ಸಂತೋಷ್ಕುಮಾರ್ ಸಹಾಯಕ ಆಯುಕ್ತ (ಎಸಿ)ರಾಗಿ ನೇಮಕ
ಮಂಗಳೂರು, ಸೆ. 25: ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಹಾಗೂ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಡಾ.ಸಂತೋಷ್ಕುಮಾರ್ ಅವರು ಸಹಾಯಕ ಆಯುಕ್ತ (ಎಸಿ)ರಾಗಿ ನೇಮಕಗೊಂಡಿದ್ದು, ಶನಿವಾರ ಕರ್ತವ್ಯದಿಂದ ಬಿಡುಗಡೆ ಹೊಂದಿದ್ದಾರೆ.
ಇದೀಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಐಟಿಡಿಪಿ ಇಲಾಖೆಯ ಅಧಿಕಾರಿ ಹೇಮಲತಾ ಪ್ರಭಾರವಾಗಿ ನಿರ್ವಹಿಸಲಿದ್ದಾರೆ. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರಭಾರವನ್ನು ಡಾ.ಬಿ.ಆರ್.ಅಂಬೇಡ್ಕರ್ ಪರಿಶಿಷ್ಟ ಜಾತಿ, ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಅನಿಕಾ ಮುದ್ಲೂರು ನಿರ್ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story