ಮಹದಾಯಿ ಹೋರಾಟಗಾರರಿಗೆ ಮಾಜಿ ಪ್ರಧಾನಿ ದೇವೇಗೌಡ ಬೆಂಬಲ
ಬೆಂಗಳೂರು, ಡಿ.25: ನಗರದ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿರುವ ಮಹದಾಯಿ ಹೋರಾಟಗಾರರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬೆಂಬಲ ವ್ಯಕ್ತಪಡಿಸಿದ್ದಾರೆ.
ಮಹದಾಯಿ ಹೋರಾಟಗಾರರ ನೇತೃತ್ವ ವಹಿಸಿರುವ ವೀರೇಶ್ ಸೊಬರದಮಠ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ.
“ನಿಮ್ಮ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಹೋರಾಟದ ಸ್ಥಳಕ್ಕೆ ಆಗಮಿಸಿ ಈ ಸಂಬಂಧ ಮಾತನಾಡುವುದಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹೇಳಿರುವುದಾಗಿ ವೀರೇಶ್ ಸೊಬರದಮಠ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ದೇವೇ ಗೌಡ ಅವರ ಮಧ್ಯಪ್ರವೇಶದಿಂದಾಗಿ ರೈತರ ಹೋರಾಟಕ್ಕೆ ಇನ್ನಷ್ಟು ಬಲ ಬಂದಿದೆ
Next Story