ಶಿವಮೊಗ್ಗ: ಲಾರಿ ಢಿಕ್ಕಿ; ಶಿಕ್ಷಕಿ ಸ್ಥಳದಲ್ಲಿಯೇ ಮೃತ್ಯು
ಶಿವಮೊಗ್ಗ, ಮಾ.16: ವೇಗವಾಗಿ ಆಗಮಿಸಿದ ಲಾರಿಯೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಮೋಟಾರ್ ಸೈಕಲ್ನಲ್ಲಿ ತೆರಳುತ್ತಿದ್ದ ಶಿಕ್ಷಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರು ಸಮೀಪದ ಮಹಿಷಿ ರಸ್ತೆಯಲ್ಲಿ ನಡೆದಿದೆ.
ಮಾಲಾರ್ ಕೋಡಿ (50) ಮೃತಪಟ್ಟ ಶಿಕ್ಷಕಿ ಎಂದು ಗುರುತಿಸಲಾಗಿದೆ. ಇವರು ಮಹಿಷಿ ಶಾಲೆಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಅಪಘಾತದ ನಂತರ ಲಾರಿ ಚಾಲಕ ವಾಹನ ನಿಲ್ಲಸದೆ ಪರಾರಿಯಾಗಿದ್ದು, ಆರೋಪಿಯ ಮಾಹಿತಿ ಸಂಗ್ರಹಿಸಿರುವ ಪೊಲೀಸರು ಬಂಧನಕ್ಕೆ ಕ್ರಮಕೈಗೊಂಡಿದ್ದಾರೆ.
ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story