ಹಂಗಾಮಿ ಸ್ಪೀಕರ್ ಆಗಿ ಉಮೇಶ್ ಕತ್ತಿ?
ಬೆಂಗಳೂರು, ಮೇ 18: ಬಿಜೆಪಿ ಚುನಾಯಿತ ಪ್ರತಿನಿಧಿಗಳ ಪೈಕಿ ಅತ್ಯಂತ ಹಿರಿಯರಾಗಿರುವ ಉಮೇಶ್ ಕತ್ತಿ ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗುವ ಸಾಧ್ಯತೆಯಿದೆ.
ಕಾಂಗ್ರೆಸ್ನ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗುತ್ತಾರೆಂಬ ಬಗ್ಗೆ ವರದಿಯಾಗಿತ್ತು.
ವಿಶ್ವಾಸ ಮತಯಾಚನೆಯಲ್ಲಿ ಹಂಗಾಮಿ ಸ್ಪೀಕರ್ ಪಾತ್ರ ಮಹತ್ವದ್ದಾಗಿದ್ದು, ಹಿರಿತನದ ಆಧಾರದಲ್ಲಿ ರಾಜ್ಯಪಾಲರು ಹಂಗಾಮಿ ಸ್ಪೀಕರ್ರನ್ನು ಆಯ್ಕೆ ಮಾಡುವ ಅಧಿಕಾರ ಹೊಂದಿದ್ದಾರೆ.
ಉಮೇಶ್ ಕತ್ತಿ 8ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
Next Story