ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ: ಕೊಲೆ ಶಂಕೆ
ಮೈಸೂರು,ಮೇ.29: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವರ ಶವ ಪತ್ತೆಯಾಗಿದ್ದು, ಪೆÇೀಷಕರು ಕೊಲೆ ಆರೋಪ ಮಾಡಿದ ಘಟನೆ ಮೈಸೂರು ತಾಲೂಕಿನ ಬ್ಯಾತಹಳ್ಳಿಯಲ್ಲಿ ನಡೆದಿದೆ.
ಮೂಲತಃ ಮೈಸೂರು ತಾಲೂಕಿನ ಶೆಟ್ಟನಾಯಕನಹಳ್ಳಿ ನಿವಾಸಿ ಕಾವ್ಯಾ (24) ರನ್ನು ಮೂರು ವರ್ಷಗಳ ಹಿಂದೆ ಬ್ಯಾತಹಳ್ಳಿಯ ನಿವಾಸಿ ಮಹೇಶ್ ಜತೆ ವಿವಾಹ ಮಾಡಿಕೊಡಲಾಗಿತ್ತು. ಬಾಣಂತನಕ್ಕಾಗಿ ತವರು ಮನೆಗೆ ಹೋಗಿದ್ದ ಕಾವ್ಯಾ ಮೂರು ದಿನಗಳ ಹಿಂದೆಯಷ್ಟೇ ಬಾಣಂತನ ಮುಗಿಸಿ ಗಂಡನ ಮನೆಗೆ ಆಗಮಿಸಿದ್ದರು.ಈಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪತಿ ಮಹೇಶ್, ಆತನ ತಂದೆ- ತಾಯಿ ಹಲ್ಲೆ ನಡೆಸಿ ಕೊಲೆಗೈದು ನೇಣು ಹಾಕಿದ್ದಾರೆ ಎಂದು ಮೃತ ಕಾವ್ಯ ಪೋಷಕರು ಆರೋಪಿಸಿದ್ದಾರೆ.ಪತಿ ಮಹೇಶ್ ಬಂಧನಕ್ಕೆ ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಕಡಕೊಳ ಠಾಣೆ ಪೆÇಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಹೇಶ್ ಮತ್ತೆ ಆತನ ತಂದೆ- ತಾಯಿ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರ್ಕಲ್ ಇನ್ಸ್ಪೆಕ್ಟರ್ ಕರೀಂ ರಾವ್ತರ್ ಮಾರ್ಗದರ್ಶನದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ