ಮೈಸೂರು: ಇಫ್ತಾರ್ ಕೂಟ ಆಯೋಜಿಸಿದ ಮಾಜಿ ಸಿ.ಎಂ ಸಿದ್ದರಾಮಯ್ಯ
ಮೈಸೂರು,ಜೂ.12: ರಂಜಾನ್ ಹಬ್ಬದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಇಫ್ತಾರ್ ಕೂಟ ಏರ್ಪಡಿಸಿದ್ದರು. ಇಂದು ಸಂಜೆ ಮೈಸೂರು-ಬೆಂಗಳೂರು ರಸ್ತೆಯ ಪ್ರೆಸ್ಟೀಜ್ ಫಂಕ್ಷನ್ ಹಾಲ್ನಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಲಾಗಿತ್ತು.
ತನ್ವೀರ್ ಸೇಠ್ಗೆ ಮಂತ್ರಿ ಸ್ಥಾನ ನೀಡಿ: ಇಫ್ತಾರ್ ಕೂಟದಲ್ಲಿ ಭಾಗಿಯಾದ ಸಿದ್ದರಾಮಯ್ಯ ಅವರಿಗೆ ತನ್ವೀರ್ ಸೇಠ್ ಅಭಿಮಾನಿಗಳು ಸಚಿವ ಸ್ಥಾನ ನೀಡುವಂತೆ ಘೋಷಣೆ ಕೂಗುತ್ತಿದ್ದ ದೃಶ್ಯ ಕಂಡುಬಂತು.
ಇಫ್ತಾರ್ ಕೂಟದಲ್ಲಿ ಸಚಿವ ಯು.ಟಿ.ಖಾದರ್, ಶಾಸಕರಾದ ತನ್ವೀರ್ ಸೇಠ್, ಡಾ.ಯತೀಂದ್ರ ಸಿದ್ದರಾಮಯ್ಯ, ಕೆಪಿಸಿಸಿ ಸದಸ್ಯ ಅಕ್ಬರ್ ಅಲೀ, ಕಾಂಗ್ರೆಸ್ ಮುಖಂಡರಾದ ಅಯೂಬ್ ಖಾನ್, ಶೌಖತ್ ಅಲಿಖಾನ್, ಮಂಜುಳ ಮಾನಸ, ಬಾಬು, ಸೋಮಣ್ಣ ಸೇರಿದಂತೆ ಹಲವರು ಇದ್ದರು.
Next Story