ನಿಪ್ಪಾಣಿ: ಟಯರ್ ಸ್ಫೋಟಗೊಂಡು ಜೀಪಿಗೆ ಢಿಕ್ಕಿ ಹೊಡೆದ ಮಿನಿ ಲಾರಿ; ನಾಲ್ವರು ಮೃತ್ಯು
ಬೆಳಗಾವಿ, ಜೂ.25: ಚಲಿಸುತ್ತಿದ್ದ ವೇಳೆ ಟಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಮಿನಿ ಲಾರಿಯೊಂದು ಜೀಪಿಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಮೃತರನ್ನು ಮಿನಿ ಲಾರಿ ಚಾಲಕ ರಮೇಶ್, ಜೀಪಿನಲ್ಲಿದ್ದ ನದೀಂ, ಶಬ್ಬೀರ್ ಹಾಗೂ ರಾಜಾ ಮುಹಮ್ಮದ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೂ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಪ್ಪಾಣಿ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಹಠಾತ್ತಾಗಿ ಮಿನಿ ಲಾರಿಯ ಟಯರ್ ಸ್ಫೋಟಗೊಂಡಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಎದುರಿನಿಂದ ಬರುತ್ತಿದ್ದ ಜೀಪಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ.
ಇದರಿಂದ ಲಾರಿ ಚಾಲಕ ರಮೇಶ್ ಸೇರಿದಂತೆ ಜೀಪಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Next Story