ಮೈಸೂರು: ದ್ವಿಚಕ್ರ ವಾಹನ-ಲಾರಿ ನಡುವೆ ಢಿಕ್ಕಿ; ಸವಾರ ಮೃತ್ಯು
ಮೈಸೂರು,ಜು.2: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿ ಸವಾರ ಸಾವನ್ನಪ್ಪಿದ ಘಟನೆ ಲಿಂಗಾಬುಧಿ ಪಾಳ್ಯದಲ್ಲಿ ನಡೆದಿದೆ.
ಮೃತರನ್ನು ಬಂಡಿಕೆರೆ ನಿವಾಸಿ ಮಹೇಶ್(28)ಎಂದು ಗುರುತಿಸಲಾಗಿದ್ದು, ಶನಿವಾರ ರಾತ್ರಿ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಲಾರಿ ಢಿಕ್ಕಿ ಹೊಡೆದಿದೆ. ತಲೆಗೆ ಹೆಲ್ಮೆಟ್ ಧರಿಸದ ಕಾರಣ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಕುರಿತು ಕೆ.ಆರ್.ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story