ಮೈಸೂರು: ಮೋಕ್ಷ ಸಿಗಲೆಂದು ಕಪಿಲಾ ನದಿಗೆ ಹಾರಿದ ವೃದ್ಧ ದಂಪತಿ
ಸಾಂದರ್ಭಿಕ ಚಿತ್ರ
ಮೈಸೂರು,ಜು.24: ಕಪಿಲಾ ನದಿಗೆ ಹಾರಿ ಪ್ರಾಣ ಬಿಟ್ಟರೆ ಮೋಕ್ಷ ಸಿಗುತ್ತದೆ ಎಂಬ ಮೂಢನಂಬಿಕೆಯಿಂದ ವೃದ್ಧ ದಂಪತಿ ಕಪಿಲಾ ನದಿಗೆ ಹಾರಿದ್ದು, ವೃದ್ಧ ಸಾವನ್ನಪ್ಪಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಬೆಂಗಳೂರು ಮೂಲದ ವೃದ್ಧ ದಂಪತಿ ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬೆಂಗಳೂರಿನ ಹೆಬ್ಬಾಳ ನಿವಾಸಿಗಳಾದ ನಾಗರಾಜು ಮತ್ತು ಕಲಾವತಿ ಎಂಬವರೇ ಕಪಿಲಾ ನದಿಗೆ ಹಾರಿದವರಾಗಿದ್ದು, ಪತಿ ನಾಗರಾಜು( 70) ಸಾವನ್ನಪ್ಪಿದ್ದು, ಅವರ ಪತ್ನಿ ಕಲಾವತಿ (60) ಅಸ್ವಸ್ಥರಾಗಿದ್ದಾರೆ. ಅವರನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story