Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡವ ಸಂಸ್ಕೃತಿಯನ್ನು ಮುಂದಿನ...

ಕೊಡವ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗಾಗಿ ಉಳಿಸಿ ಬೆಳೆಸಿ: ಪೆಮ್ಮಂಡ ಕೆ.ಪೊನ್ನಪ್ಪ ಕರೆ

ಬೇಲ್‍ನಮ್ಮೆ (ಕೃಷಿ ಹಬ್ಬ) ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ7 Aug 2018 12:00 AM IST
share
ಕೊಡವ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗಾಗಿ ಉಳಿಸಿ ಬೆಳೆಸಿ: ಪೆಮ್ಮಂಡ ಕೆ.ಪೊನ್ನಪ್ಪ ಕರೆ

ಮಡಿಕೇರಿ, ಆ.6 : ಅನಾದಿ ಕಾಲದಿಂದಲೂ ಉಳಿಸಿಕೊಂಡು ಬಂದಿರುವ ಕೊಡವ ಭಾಷಾ ಜನಾಂಗದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವುದು ಅತ್ಯಗತ್ಯ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪೆಮ್ಮಂಡ ಕೆ.ಪೊನ್ನಪ್ಪ ಅವರು ತಿಳಿಸಿದ್ದಾರೆ. 

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಕಾನೂರು ಕೊಡವ ಸಮಾಜ, ಕೋತೂರು ಅಮ್ಮ ಕೊಡವ ಸಮಾಜ, ಕಾನೂರು-ಕೋತೂರು ಮಹಿಳಾ ಸಮಾಜ, ಕಾನೂರು ಪಂಚಾಯತ್ ವ್ಯಾಪ್ತಿಯ ಸಂಘ ಸಂಸ್ಥೆಯ ಸಹಯೋಗದಲ್ಲಿ ಕೋತೂರಿನ ಮನ್ನಕ್ಕಮನೆ ವಾಸು ನಾಣಮಯ್ಯ, ಮನ್ನಕ್ಕಮನೆ ಕಿರಣ್ ಅವರ ಗದ್ದೆಯಲ್ಲಿ ಸೋಮವಾರ ನಡೆದ ಬೇಲ್‍ನಮ್ಮೆ (ಕೃಷಿ ಹಬ್ಬ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಕೊಡವ ಆಚಾರ ವಿಚಾರಗಳನ್ನು ಬಹಳ ಹಿಂದಿನಿಂದಲೂ ಉಳಿಸಿಕೊಂಡು ಬರಲಾಗಿದ್ದು, ಅದನ್ನು ಯುವಜನರಿಗೆ ತಿಳಿಸಬೇಕಿದೆ. ಆ ನಿಟ್ಟಿನಲ್ಲಿ ಬೇಲ್‍ನಮ್ಮೆ, ಮುಂದ್‍ನಮ್ಮೆ, ಕೋಲ್ ಮಂದ್ ಹೀಗೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಹೇಳಿದರು. ಕೊಡವ ಭಾಷಿಕ ಸಂಸ್ಕೃತಿ, ಕಲೆ, ಸಾಹಿತ್ಯ ಚಟುವಟಿಕೆಗಳನ್ನು ಯುವ ಜನರಿಗೆ ಪರಿಚಯಿಸಿಕೊಂಡು ಹೋಗಬೇಕಿದೆ ಎಂದರು. 

ಕಾನೂರು ಕೊಡವ ಸಮಾಜದ ಅಧ್ಯಕ್ಷ ಮಚ್ಚಮಡ ಕಂದಾ ಭೀಮಯ್ಯ ಅವರು ಮಾತನಾಡಿ ಈಗಿನ ಯುವಜನರು ಕೃಷಿ ಚಟುವಟಿಕೆಯಿಂದ ದೂರವಾಗುತ್ತಿದ್ದಾರೆ. ಇದು ಸರಿಯಲ್ಲ. ಕೊಡಗು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದು ಅವರು ಕರೆ ನೀಡಿದರು. ಜೂನ್-ಜುಲೈ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಗೆ ಕೃಷಿ, ಕಾಫಿ ಬೆಳೆ ಹಾನಿಯಾಗಿದೆ. ಸೂಕ್ತ ಪರಿಹಾರ ವಿತರಣೆ ಮಾಡಬೇಕು ಎಂದು ಇದೇ ಸಂದರ್ಭ ಅವರು ಮನವಿ ಮಾಡಿದರು. 

ಕಾನೂರು ಗ್ರಾ.ಪಂ. ಅಧ್ಯಕ್ಷದ ಹೆಮ್ಮಚ್ಚಿಮನೆ ಲತಾ ಗಣೇಶ್ ಅವರು ಮಾತನಾಡಿ ಹಿಂದೆ ಕೃಷಿ ಚಟುವಟಿಕೆಯಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಯಂತ್ರೋಪಕರಣ ಬಂದಿದ್ದರೂ ಸಹ ಕೃಷಿ ಚಟುವಟಿಕೆಯಿಂದ ಹಿಂದೆ ಸರಿಯುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಕೊಡಗಿನ ಮೂಲೆ ಮೂಲೆಗಳಲ್ಲಿ ಬೇಲ್‍ನಮ್ಮೆ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. 

ಕೋತೂರು ಅಮ್ಮ ಕೊಡವ ಸಮಾಜದ ಅಧ್ಯಕ್ಷರಾದ ಮನ್ನಕ್ಕಮನೆ ರಾಜು ಅಯ್ಯಪ್ಪಮಯ್ಯ ಮಾತನಾಡಿ, ಕೃಷಿ ಚಟುವಟಿಕೆಯಲ್ಲಿ ನಾಟಿ ಮಾಡುವುದರ ಜೊತೆಗೆ ಜೀವನ ಪದ್ಧತಿ ಇದೆ ಎಂಬುದನ್ನು ಮರೆಯುವಂತಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. 

ಸುಳ್ಳಿಮಾಡ ಬಿ.ತಿಮ್ಮಯ್ಯ, ಮನ್ನಕ್ಕಮನೆ ನಾಣಮಯ್ಯ, ಚೆಪ್ಪುಡಿರ ಪಾರ್ವತಿ ಪೊನ್ನಪ್ಪ, ಹೆಮ್ಮಚ್ಚಿಮನೆ ಜಿ.ವಿಠಲ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. 

ಪಾಥಮಿಕ, ಪ್ರೌಢಶಾಲೆ, ಕಾಲೇಜು, ಸಾರ್ವಜನಿಕರಿಗೆ ಪೈರು ತೆಗೆಯುವ ಸ್ಪರ್ಧೆ, ಪೈರು ನೆಡುವ ಸ್ಪರ್ಧೆ, ಕೆಸರುಗದ್ದೆ ಓಟ, ಕೊಡಿನಾಡಿ ಸ್ಪರ್ಧೆ, ಹಗ್ಗ ಜಗ್ಗಾಟ ಸ್ಪರ್ಧೆ, ನೇರ್‍ಪುಡಿ ಎಸೆಯುವ ಸ್ಪರ್ಧೆ, ಅಡಿಕೆ ಪಾಳೆ ಬಲಿಪೊ ಸ್ಪರ್ಧಾ ಕಾರ್ಯಕ್ರಮಗಳು ನಡೆದವು. 

ಕೋತೂರು ಕಾವೇರಿ ಅಮ್ಮ ಕೊಡವ ಮಹಿಳಾ ಸಮಾಜದ ಮನ್ನಕ್ಕಮನೆ ಅಶ್ವಿನಿ ನಂದ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ಐತಿಚಂಡ ರಮೇಶ್ ಉತ್ತಪ್ಪ, ಅಮ್ಮಣಿಚಂಡ ಪ್ರವೀಣ್ ಚಂಗಪ್ಪ, ಟಾಟು ಮೊನ್ನಪ್ಪ, ಸುಳ್ಳಿಮಾಡ ಭವಾನಿ ಕಾವೇರಪ್ಪ, ಮನುಮುತ್ತಪ್ಪ, ಪ್ಯಾನ್ಸಿ ಮುತ್ತಣ್ಣ, ತೋರೆರ ಮುದ್ದಯ್ಯ, ಕುಡಿಯರ ಶಾರದ, ಮನ್ನಕ್ಕಮನೆ ಬಾಲಕೃಷ್ಣ, ಅಜ್ಜಮಾಡ ಕುಶಾಲಪ್ಪ, ಬೊಳ್ಳಜ್ಜೀರ ಅಯ್ಯಪ್ಪ, ಉಮೇಶ ಕೇಚಮಯ್ಯ ಇತರರು ಇದ್ದರು. ರಿಜಿಸ್ಟ್ರ್ರರ್ ಉಮರಬ್ಬ ಸ್ವಾಗತಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X