ಎಲ್.ಕೆ.ಅತೀಕ್, ಎಂ.ವಿ.ಸಾವಿತ್ರಿ ವರ್ಗಾವಣೆ
ಬೆಂಗಳೂರು,ಅ.22: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರಕಾರಿ (ಪಂಚಾಯತ್ ರಾಜ್) ಮುಖ್ಯ ಕಾರ್ಯದರ್ಶಿ ಎಂ.ವಿ.ಸಾವಿತ್ರಿಯವರನ್ನು ಆಹಾರ, ನಾಗರಿಕ ಪೂರೈಕೆಗಳು ಮತ್ತು ಗ್ರಾಹಕ ವ್ಯವಹಾರ ಮತ್ತು ಕಾನೂನಾತ್ಮಕ ಮಾಪಮಶಾಸ್ತ್ರ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಜೊತೆಗೆ ಸಾವಿತ್ರಿಯವರನ್ನು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹುದ್ದೆಯನ್ನು ನಿರ್ವಹಿಸುವಂತೆಯೂ ಸೂಚಿಸಲಾಗಿದೆ. ಈ ಹುದ್ದೆಯಲ್ಲಿದ್ದ ಮುಹಮ್ಮದ್ ಮೊಹ್ಸಿನ್ ಅವರನ್ನು ಸದ್ಯ ಈ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರಕಾರಿ (ಪಂಚಾಯತ್ರಾಜ್) ಮುಖ್ಯ ಕಾರ್ಯದರ್ಶಿ ಜವಾಬ್ದಾರಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರಕಾರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ನೀಡಲಾಗಿದೆ ಎಂದು ರಾಜ್ಯ ಸರಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Next Story