ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ನಾಲ್ವರು ಶಾಸಕರು ಗೈರು
ಬೆಂಗಳೂರು,ಜ.18: ಬಿಜೆಪಿ ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಇಂದು ಕರೆಯಲಾಗಿದ್ದ ಕಾಂಗ್ರೆಸ್ ವಿಶೇಷ ಶಾಸಕಾಂಗ ಪಕ್ಷದ ಸಭೆಗೆ ನಾಲ್ವರು ಶಾಸಕರು ಗೈರುಹಾಜರಾಗಿದ್ದಾರೆ.
ವಿಧಾನಸೌದದ ಮೂರನೆ ಮಹಡಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಬಳ್ಳಾರಿ ಶಾಸಕ ಬಿ.ನಾಗೇಂದ್ರ, ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹಾಗೂ ಚಿಂಚೋಳಿ ಶಾಸಕ ಡಾ. ಉಮೇಶ್ ಜಾಧವ್ ಅವರು ಗೈರುಹಾಜರಾಗಿದ್ದಾರೆ.
ಮಧ್ಯಾಹ್ನ 3:30 ಕ್ಕೆ ನಿಗದಿಯಾಗಿದ್ದ ಸಭೆ 1 ಗಂಟೆ ತಡವಾಗಿ ಆರಂಭವಾಯಿತು. ಒಟ್ಟು 75 ಶಾಸಕರು ಈ ಸಭೆಗೆ ಹಾಜರಾಗಿದ್ದಾರೆ.