ಶಾಸಕ ಉಮೇಶ್ ಬಿಜೆಪಿ ಸೇರ್ಪಡೆ ಬಗ್ಗೆ ವರಿಷ್ಠರಿಂದ ತೀರ್ಮಾನ: ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್
ಎನ್.ರವಿಕುಮಾರ್
ಕಲಬುರಗಿ, ಮಾ.3: ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಅತೃಪ್ತ ಶಾಸಕ ಡಾ. ಉಮೇಶ್ ಜಾಧವ್ ಬಿಜೆಪಿಗೆ ಸೇರ್ಪಡೆಗೊಳ್ಳುವುದು ಅಂತಿಮಗೊಂಡಿಲ್ಲವೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಜಾಧವ್ ಬಿಜೆಪಿ ಸೇರುವ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ. ಹಾಗೂ ಕಲಬುರಗಿ ಲೋಕಸಭೆ ಅಭ್ಯರ್ಥಿ ಬಗ್ಗೆ ನಿರ್ಣಯ ತೆಗೆದುಕೊಳ್ಳುವುದು ಅಮಿತ್ ಶಾಗೆ ಬಿಟ್ಟಿದ್ದು ಎಂದರು.
ಮಾ.6ರಂದು ಪ್ರಧಾನಿ ಮೋದಿ ಕಲಬುರಗಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಎನ್.ವಿ.ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, 11.45 ರಿಂದ 12 ಗಂಟೆವರೆಗೆ ಸರಕಾರಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಆಯುಶ್ಮಾನ್ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದು, ಬಳಿಕ ಮೋದಿ ಬೀದರ್-ಕಲಬುರಗಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದರು.
Next Story