ಡಿಕೆಶಿಯನ್ನು ಭೇಟಿ ಮಾಡಿದ ಸಂಸದ ಬಿ.ವೈ,ರಾಘವೇಂದ್ರ!
ಬೆಂಗಳೂರು, ಜೂ.5: ಶಿವಮೊಗ್ಗ ಕ್ಷೇತ್ರದ ನೂತನ ಸಂಸದರಾದ ಬಿ.ವೈ,ರಾಘವೇಂದ್ರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ನ್ನು ಭೇಟಿ ಮಾಡಿ, ಜಿಲ್ಲೆಗೆ ಸಂಬಂಧಿಸಿದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಘೋಷಣೆಯಾದ ಒಟ್ಟು 6 ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಅಗತ್ಯ ಅನುದಾನ ಬಿಡುಗಡೆ ಜೊತೆಗೆ ಕೂಡಲೇ ಟೆಂಡರ್ಗೆ ಆಹ್ವಾನಿಸಿ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಶೀಘ್ರವೆ ಕೈಗೆತ್ತಿಕೊಳ್ಳುವಂತೆ ಡಿ.ಕೆ.ಶಿವಕುಮಾರ್ ಗೆ ಸಂಸದ ರಾಘವೇಂದ್ರ ಮನವಿ ಮಾಡಿದ್ದಾರೆ.
ಈ ವೇಳೆ ಸಚಿವ ಡಿ.ಕೆ.ಶಿವಕುಮಾರ್, ನೂತನ ಸಂಸದರಾಗಿ ಆಯ್ಕೆಯಾಗಿರುವುದಕ್ಕೆ ಬಿ.ವೈ.ರಾಘವೇಂದ್ರರನ್ನು ಅಭಿನಂದಿಸಿ, ನೀರಾವರಿ ಯೋಜನೆಗಳ ಅನುದಾನಕ್ಕೆ ಸಂಬಂಧಿಸಿದಂತೆ ಪರಿಶೀಲಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.
Next Story