ಪ್ರೀತಿಸಿದ್ದಕ್ಕೆ ಯುವತಿಯ ಸಂಬಂಧಿಕರಿಂದ ಯುವಕನ ಹತ್ಯೆ: ಆರೋಪ
ಬೆಂಗಳೂರು, ಜು.1: ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆಗೈದಿರುವ ಘಟನೆ ಇಲ್ಲಿನ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ರವಿ(27) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ.
ರವಿ ಮಾನಗಲ್ ನಿವಾಸಿಯಾಗಿದ್ದು, ಸಣ್ಣ ಮಟ್ಟದ ಕಾಮಗಾರಿಗಳ ಗುತ್ತಿಗೆದಾರನಾಗಿದ್ದು, ತನ್ನ ಸಂಬಂಧಿ ಯುವತಿಯನ್ನು ಪ್ರೀತಿಸುತ್ತಿದ್ದನು. ಇವರಿಬ್ಬರ ಪ್ರೀತಿಗೆ ಯುವತಿಯ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ಯುವತಿಯ ಸಂಬಂಧಿಕರು ರಾತ್ರಿ ರವಿಯನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ರಸ್ತೆಯ ಆನೆಹಳ್ಳಿ ಬಳಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾರೆಂದು ರವಿ ಪೋಷಕರು ಆರೋಪಿಸಿದ್ದಾರೆ.
ಘಟನೆ ಸಂಬಂಧ ಮಾಗಡಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
Next Story