ಸಹಾಯಕ ಪ್ರಾಧ್ಯಾಪಕಿ ಟಿ.ವಿ.ಭಾರತಿಗೆ ಪಿಎಚ್ಡಿ
ಮಂಡ್ಯ, ಜು.4: ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಡಾ.ಎಂ.ಎಸ್.ಶೇಖರ್ ಅವರ ಮಾರ್ಗದರ್ಶನದಲ್ಲಿ ಟಿ.ವಿ.ಭಾರತಿ ಅವರು ಸಂಶೋಧನೆ ನಡೆಸಿ ಸಾದರ ಪಡಿಸಿದ 'ಪ್ರೊ. ಎಸ್.ಜಿ.ಸಿದ್ದರಾಮಯ್ಯ ಅವರ ಸಾಹಿತ್ಯ' ಎಂಬ ಮಹಾಪ್ರಬಂಧವನ್ನು ಕನ್ನಡ ಭಾಷಾ ವಿಷಯದಲ್ಲಿ ಪಿಎಚ್ಡಿ ಪದವಿಗಾಗಿ ಮೈಸೂರು ವಿಶ್ವವಿದ್ಯಾಲಯ ಅಂಗೀಕರಿಸಿದೆ.
ಟಿ.ವಿ.ಭಾರತಿ ಮದ್ದೂರು ತಾಲೂಕು ಕೊಪ್ಪದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Next Story