Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಗುಂಪು ಹತ್ಯೆ' ವಿರೋಧಿಸಿ ಜು.15ರಿಂದ...

'ಗುಂಪು ಹತ್ಯೆ' ವಿರೋಧಿಸಿ ಜು.15ರಿಂದ ಪಿಎಫ್‌ಐ ರಾಷ್ಟ್ರೀಯ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ15 July 2019 8:14 PM IST
share
ಗುಂಪು ಹತ್ಯೆ ವಿರೋಧಿಸಿ ಜು.15ರಿಂದ ಪಿಎಫ್‌ಐ ರಾಷ್ಟ್ರೀಯ ಅಭಿಯಾನ

ಬೆಂಗಳೂರು, ಜು.15: ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವು ಇಂದು ಲಿಂಚಿಸ್ಥಾನದ ಗಣರಾಜ್ಯ ಎಂಬ ಕುಖ್ಯಾತಿಗೆ ಒಳಗಾಗಿ, ಧಾರ್ಮಿಕ ಮತ್ತು ಜಾತಿ ತಾರತಮ್ಯದಿಂದ ಮುಗ್ಧ ಜನರನ್ನು ಅಟ್ಟಾಡಿಸಿಕೊಂಡು ಬರ್ಬರವಾಗಿ ಗುಂಪು ಹತ್ಯೆ ಮಾಡುತ್ತಿರುವುದನ್ನು ವಿರೋಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜು.15ರಿಂದ ಆ.31ರವರೆಗೆ ರಾಷ್ಟ್ರೀಯ ಅಭಿಯಾನವನ್ನು ಹಮ್ಮಿಕೊಂಡಿದೆ.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫ್ರಂಟ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಷಾ, ಗೋ ಮಾಂಸ ಸೇವಿಸಿದರು, ಗೋವನ್ನು ಕೊಂದಿದ್ದರು ಎಂಬ ಕ್ಷುಲ್ಲಕ ಆರೋಪದ ಮೇಲೆ ದೇಶದಾದ್ಯಂತ ಗುಂಪು ಹತ್ಯೆಗಳು ಹೆಚ್ಚಾಗಿ ನಡೆಯುತ್ತಿವೆ. 2014ರಲ್ಲಿ ಬಿಜೆಪಿ ಅಧಿಕಾರಕ್ಕೇರಿದ ನಂತರ 180 ಗಂಭೀರ ಹಾಗೂ 33 ಸಾಮಾನ್ಯ ಗುಂಪು ಹಲ್ಲೆ ಪ್ರಕರಣಗಳು ನಡೆದಿದ್ದು, ಅಮಾಯಕರ ಪ್ರಾಣ ರಕ್ಷಣೆಯನ್ನು ಮಾಡುವಲ್ಲಿ ಕೇಂದ್ರ ಸರಕಾರ ಮೌನವಹಿಸಿದೆ. ಹೀಗಾಗಿ ನಾವು ಅಭಿಯಾನ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಆಡಳಿತದ 2ನೇ ಅವಧಿಯಲ್ಲಿ ಈ ಗುಂಪು ಹತ್ಯೆಯು ಮತ್ತಷ್ಟು ಬರ್ಬರತೆಯನ್ನು ತಾಳಿದೆ. ಬುಡಕಟ್ಟು ರಾಜ್ಯವಾಗಿರುವ ಜಾರ್ಖಂಡ್ ಗುಂಪು ಹತ್ಯೆಗೆ ಖ್ಯಾತಿ ಪಡೆದಿದೆ. ಅಲೀಮುದ್ಧೀನ್ ಅನ್ಸಾರಿಯಿಂದ ಹಿಡಿದು ಇತ್ತೀಚೆಗೆ ತಬ್ರೇಝ್ ಅನ್ಸಾರಿಯ ಹತ್ಯೆಯವರೆಗೂ ಅದರ ಪಟ್ಟಿ ಮುಂದುವರೆದಿದೆ. ತಬ್ರೇಝ್ ಅನ್ಸಾರಿಯನ್ನು ಕಟ್ಟಿಹಾಕಿ ಹಲವು ತಾಸುಗಳ ಕಾಲ ಬರ್ಬರವಾಗಿ ಚಿತ್ರಹಿಂಸೆ ನೀಡಿ ಜೈ ಶ್ರೀ ರಾಮ್, ಜೈ ಹನುಮಾನ್ ಎಂದು ಹೇಳುವಂತೆ ಬಲವಂತ ಪಡಿಸಿರುವುದು ದೇಶದ ಜನತೆಯನ್ನು ಉಸಿರುಗಟ್ಟಿಸುವಂತಹ ಪ್ರಕರಣ ಎಂದು ವಿಷಾದಿಸಿದರು.

ಇನ್ನು, ಪಾರ್ಲಿಮೆಂಟಿನಲ್ಲಿ ಮುಸ್ಲಿಂ ಸಂಸದರೊಬ್ಬರು ಪ್ರಮಾಣವಚನ ಸ್ವೀಕರಿಸುವಾಗ ಮೊಳಗಿದ್ದ ಜೈ ಶ್ರೀ ರಾಮ್ ಘೋಷಣೆಯಿಂದ ಪ್ರೇರಣೆಗೊಂಡು ಇಂತಹ ಪ್ರಕರಣಗಳು ನಡೆಯುತ್ತಿವೆ. ಇದು ದೇಶದ ಅಲ್ಪಸಂಖ್ಯಾತ, ದಲಿತ ಹಾಗೂ ಹಿಂದುಳಿದ ಸಮುದಾಯಗಳಲ್ಲಿ ಭಯದ ವಾತಾವರಣವನ್ನು ಸೃಷ್ಟಿ ಮಾಡಿದೆ ಎಂದು ಆತಂಕಪಟ್ಟರು.

ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸಾರ್ವಜನಿಕ ಸಭೆ, ಕಾರ್ನರ್ ಮೀಟಿಂಗ್, ಬೀದಿ ನಾಟಕ, ಭಿತ್ತಿ ಪತ್ರ, ಕರ ಪತ್ರ ವಿತರಣೆ, ಸೆಮಿನಾರ್ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಕಾರ್ಯಕ್ರಮಗಳಿಗೆ ರಾಜ್ಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಫ್ರಂಟ್‌ನ ರಾಜ್ಯ ಸಮಿತಿ ಸದಸ್ಯ ಶಾಪಿ ಬೆಳ್ಳಾರೆ ಹಾಗೂ ರಾಜ್ಯ ಸಮಿತಿ ಸದಸ್ಯ ಫಾರೂಕ್ ರಾಮನಗರ ಉಪಸ್ಥಿತರಿದ್ದರು.

50 ಮಂದಿಯನ್ನು ಹಾಡುಹಗಲೇ ಹತ್ಯೆ ಮಾಡಲಾಗಿದೆ. ಕೆಲವರನ್ನು ಅತ್ಯಂತ ಬರ್ಬರವಾಗಿ ಜೀವಂತ ದಹಿಸಲಾಗಿದೆ. ಗುಂಪು ಹತ್ಯೆಗೆ ಒಳಗಾದವರಲ್ಲಿ ಶೇ.56ರಷ್ಟು ಬಡ ಮುಸ್ಲಿಮರು ಹಾಗೂ ಶೇ.44ರಷ್ಟು ಹಿಂದುಳಿದ ಜಾತಿಯವರಾಗಿದ್ದಾರೆ.

-ಅಬ್ದುಲ್ ರಜಾಕ್ ಕೆಮ್ಮಾರ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ

ಅಭಿಯಾನದ ಘೋಷ ವಾಕ್ಯ

ಫ್ಯಾಶಿಸ್ಟ್ ಶಕ್ತಿಗಳನ್ನು ಕಾನೂನಿನ ಅಡಿಯಲ್ಲಿ ಪ್ರತಿರೋಧಿಸಿ ದೇಶದ ಜನರ ಮನಸ್ಸಿನಲ್ಲಿ ನಿರ್ಭಯತ್ವ ಮತ್ತು ಸ್ವಾಭಿಮಾನವನ್ನು ಸೃಷ್ಟಿ ಮಾಡಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದೇಶದಾದ್ಯಂತ ‘ನಿರ್ಭೀತಿಯಿಂದ ಜೀವಿಸಿ, ಘನತೆಯಿಂದ ಜೀವಿಸಿ’ ಎಂಬ ಘೋಷಣೆಯೊಂದಿಗೆ ರಾಷ್ಟ್ರೀಯ ಅಭಿಯಾನವನ್ನು ಹಮ್ಮಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X