ಸರಕಾರ ಉರುಳಿಸಲು ರಾಜ್ಯಪಾಲರು ಅವಸರ ಪಡುತ್ತಿದ್ದಾರೆ: ಡಿಸಿಎಂ ಪರಮೇಶ್ವರ್
ಬೆಂಗಳೂರು, ಜು.20: ರಾಜ್ಯದಲ್ಲಿ ಸಮ್ಮಿಶ್ರ ಸರಕಾರವನ್ನು ಉರುಳಿಸಲು ಬಿಜೆಪಿ ರೀತಿಯಲ್ಲಿಯೆ ರಾಜ್ಯಪಾಲರು ಅವಸರ ಪಡುತ್ತಿದ್ದಾರೆಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ಅವರು, ರಾಜ್ಯಪಾಲ ವಜುಭಾಯಿ ವಾಲಾ ಮೈತ್ರಿ ಸರಕಾರ ಕೂಡಲೆ ವಿಶ್ವಾಸಮತ ಯಾಚನೆ ಮಾಡಬೇಕೆಂದು ಪದೇ ಪದೇ ಗಡುವು ನೀಡುತ್ತಿರುವುದು ಪಕ್ಷಪಾತ ಧೋರಣೆಯಾಗಿದೆ. ವಿಶ್ವಾಸಮತಯಾಚನೆಯನ್ನು ಬೇಕಾಬಿಟ್ಟಿಯಾಗಿ ಮಾಡಲು ಸಾಧ್ಯವಿಲ್ಲ. ಸಂಸದೀಯ ಕಾನೂನುಗಳ ಅನುಗುಣವಾಗಿ ಅನುಸರಿಸಬೇಕಾದ ಕ್ರಮಗಳನ್ನು ಅನುಸರಿಸಿದ ನಂತರವೇ ವಿಶ್ವಾಸಮತ ಮಂಡಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
Next Story