ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ: ಬಿಎಸ್ವೈ ನಿರ್ಧಾರಕ್ಕೆ ಜೆಡಿಎಸ್ ಟೀಕೆ
ಬೆಂಗಳೂರು, ಆ. 15: ‘ಹತ್ತು ಕೋಟಿ ದೇಣಿಗೆ ನೀಡಿದ ಕಂಪೆನಿಗಳ ಹೆಸರನ್ನು ಗ್ರಾಮಗಳಿಗೆ ಇಡುವ ಮುಖ್ಯಮಂತ್ರಿ ಯಡಿಯೂರಪ್ಪನವರ ತೀರ್ಮಾನ ತುಘಲಕ್ ನಿರ್ಧಾರದಂತಿದೆ’ ಎಂದು ಜಾತ್ಯತೀತ ಜನತಾದಳ(ಜೆಡಿಎಸ್) ಟೀಕಿಸಿದೆ.
‘ನಮ್ಮ ರಾಜ್ಯದ ಪ್ರತೀ ಗ್ರಾಮದ ಹೆಸರಿಗೂ ಅದರದ್ದೇ ಆದ ಹಿನ್ನೆಲೆಯಿದೆ. ನೆರೆಯಿಂದ ಎಲ್ಲವನ್ನೂ ಕಳೆದುಕೊಂಡಿರುವವರಿಗೆ ತಮ್ಮ ಗ್ರಾಮದ ಹೆಸರನ್ನೂ ಕಳೆದುಕೊಳ್ಳುವಂತೆ ಮಾಡಬೇಡಿ. ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ’ ಎಂದು ಟ್ವಿಟ್ಟರ್ ಮೂಲಕ ಜೆಡಿಎಸ್ ಮನವಿ ಮಾಡಿದೆ.
Next Story