ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು
ಮಡಿಕೇರಿ ಆ.18 : ವಿದ್ಯುತ್ ಸ್ಪರ್ಶಿಸಿ ನಾಗರಹೊಳೆ ರಕ್ಷಿತಾರಣ್ಯಕ್ಕೆ ಸೇರಿದ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ದಕ್ಷಿಣಕೊಡಗಿನ ಕೆ.ಬಾಡಗ ಗ್ರಾಮದ ತೋಟವೊಂದರಲ್ಲಿ ನಡೆದಿದೆ.
ಎರ್ಮಾಡು ಎಂಬಲ್ಲಿನ ತೋಟಕ್ಕೆ ಶನಿವಾರ ರಾತ್ರಿ ಗಂಡಾನೆ ಪ್ರವೇಶಿಸಿದ್ದು, ಈ ಸಂದರ್ಭ ವಿದ್ಯುತ್ ಸ್ಪರ್ಷಗೊಂಡಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಮಹಜರು ಮತ್ತು ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story