ಹಾಸನ ಜಿಲ್ಲಾಧಿಕಾರಿ ಅಕ್ರಮ್ ಪಾಷ ವರ್ಗಾವಣೆ
ಬೆಂಗಳೂರು, ಆ.27: ರಾಜ್ಯ ಸರಕಾರವು ಹಾಸನ ಜಿಲ್ಲಾಧಿಕಾರಿ ಅಕ್ರಮ್ ಪಾಷ ಸೇರಿದಂತೆ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದ ಆರ್.ಗಿರೀಶ್ರನ್ನು ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ, ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಕೆ.ಎನ್.ರಮೇಶ್ರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ-3ರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಆರ್.ಲತಾ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಆದರೆ, ಅಕ್ರಮ್ ಪಾಷ ಅವರಿಗೆ ಯಾವುದೇ ಸ್ಥಾನ ನೀಡದೆ ವರ್ಗಾವಣೆ ಮಾಡಲಾಗಿದೆ.
Next Story