ಶ್ರೀನಿವಾಸಪ್ರಸಾದ್ ರ 'ಒಳಮೀಸಲಾತಿ' ಹೇಳಿಕೆಗೆ ಬೆಂಬಲವಿದೆ: ಪ್ರೊ.ಮಹೇಶ್ ಚಂದ್ರಗುರು
ಮೈಸೂರು, ಆ.27: ಒಳಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಸದ ವಿ.ಶ್ರೀನಿವಾಸಪ್ರಸಾದ್ ಹೇಳಿರುವ ವಿಚಾರ ಪ್ರಾಯೋಗಿಕವಾಗಿ ನ್ಯಾಯ ಸಮ್ಮತವಾಗಿದ್ದು, ಸಂವಿಧಾನಾತ್ಮಕ ಆಶಯಗಳಿಗೆ ಅನುಗುಣವಾಗಿದೆ. ಅವರ ನಿಲುವನ್ನು ನಾನು ಬೆಂಬಲಿಸುತ್ತೇನೆ ಎಂದು ಪ್ರಗರಿಪರ ಚಿಂತಕ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು ಹೇಳಿದರು.
ಒಳಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಸಂವಿಧಾನದಲ್ಲಿ ಯಾವುದೇ ಅವಕಾಶವಿಲ್ಲ. ಹಲವು ವರ್ಷಗಳ ಹಿಂದೆ ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಸರಕಾರ ಮಾದಿಗರಿಗೆ ಒಳಮೀಸಲಾತಿ ನೀಡಿರುವುದನ್ನು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ಆ ವಿಚಾರವನ್ನು ವಿ.ಶ್ರೀನಿವಾಸಪ್ರಸಾದ್ ವ್ಯಕ್ತಪಡಿಸಿದ್ದು, ಕೆಲವು ಕಿಡಿಗೇಡಿಗಳು ಅನಾಗರಿಕರಂತೆ ವಿರೋಧ ಮಾಡಿರುವುದು ಖಂಡನೀಯ, ಒಳಮೀಸಲಾತಿಗೆ ಸಂಬಂಧಸಿದಂತೆ ಸಂಸದ ವಿ.ಶ್ರೀನಿವಾಸ್ಪ್ರಸಾದ್ ನಿಲುವಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.
Next Story