ಹಿಂದೂಗಳಿಗೆ ಭಾರತ ರತ್ನ ಕೊಡಬೇಡಿ ಎಂದು ನಾನು ಹೇಳಿಲ್ಲ: ಸಿದ್ದರಾಮಯ್ಯ
ಮೈಸೂರು: ಹಿಂದೂಗಳಿಗೆ ಭಾರತ ರತ್ನ ಕೊಡಬೇಡಿ ಎಂದು ನಾನು ಹೇಳಿಲ್ಲ, ನಾನು ಕೂಡು ಓರ್ವ ಹಿಂದೂ. ಹಿಂದುತ್ವದ ಮೂಲಕ ಕೋಮುವಾದ ಬಿತ್ತುವವರಿಗೆ ಭಾರತ ರತ್ನ ಬೇಡ ಎಂಬ ಬಗ್ಗೆ ಹೇಳಿರುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ನೃಪತುಂಗ ಶಾಲೆಯಲ್ಲಿ ನಡೆದ ಗಾಂಧಿ ವಿಚಾರ ಪರಿಷತ್ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ, ಮಾತನಾಡಿದರು.
ಸಾವರ್ಕರ್ ಹಿಂದೂ ಮಹಾಸಭಾದಲ್ಲಿದ್ದರು. ಹಿಂದುತ್ವ ಪ್ರತಿಪಾದಕರು ಎಂಬ ಕಾರಣಕ್ಕಾಗಿಯೇ ಬಿಜೆಪಿಯವರು ಅವರಿಗೆ ಭಾರತ ರತ್ನ ಕೊಡುತ್ತಿದ್ದಾರೆ. ಗಾಂಧಿಯನ್ನು ಕೊಂದ ಆರೋಪಿಗೆ ಭಾರತ ರತ್ನ ಬೇಡವೆಂದು ಹೇಳಿರುವುದಾಗಿ ಸಿದ್ದರಾಮಯ್ಯ ತಿಳಿಸಿದರು.
ಸಿ.ಟಿ.ರವಿ ಅವರ ಟೀಕೆ ವಿಚಾರ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿ.ಟಿ.ರವಿ ಓರ್ವ ಯಕಶ್ಚಿತ್ ರಾಜಕಾರಣಿ ಎಂದರು. ಮತ್ತೊಮ್ಮೆ ಮುಖ್ಯಮಂತ್ರಿ ಆಗ್ತೀರಾ ? ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ, ಜನರ ಆಶೀರ್ವಾದ ಇದ್ದರೆ ನೋಡೋಣ. ರಾಜಕಾರಣ ಹೇಗೆ ಬರುತ್ತೆ ಅಂತ ಹೇಳೋಕೆ ಆಗಲ್ಲ. ಅವಕಾಶ ಸಿಕ್ಕರೆ ಮತ್ತೊಮ್ಮೆ ಸಿಎಂ ಆಗುತ್ತೇನೆ, ತಪ್ಪೇನಿದೆ ? ಎಂದರು.