ಹನೂರು ವಿಷ ಪ್ರಸಾದ ದುರಂತ: ಜಾಮೀನಿಗಾಗಿ ಸುಪ್ರೀಂ ಮೆಟ್ಟಿಲೇರಿದ ಆರೋಪಿಗಳು
ಹನೂರು, ನ.22: ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಆರೋಪಿಗಳು ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಘಟನೆ ನಡೆದು ಒಂದು ವರ್ಷವಾದರೂ ಜಾಮೀನು ಸಿಗದ ಹಿನ್ನೆಲೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಕಳೆದ ಡಿಸೆಂಬರ್ ನಲ್ಲಿ ಹನೂರು ತಾಲೂಕಿನ ಸುಳ್ವಾಡಿ ಕಿಚ್ಚಗುತ್ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಹಾಕಲಾಗಿತ್ತು. ಘಟನೆಯಿಂದ 17 ಮಂದಿ ಸಾವನ್ನಪ್ಪಿದ್ದರು. ಘಟನೆ ಸಂಬಂಧ ನಾಲ್ವರು ಜೈಲು ಸೇರಿದ್ದು, ಇದೀಗ ಜಾಮೀನಿಗಾಗಿ ಸುಪ್ರೀಂ ಮೊರೆ ಹೋಗಿದ್ದಾರೆ ಎನ್ನಲಾಗಿದೆ.
Next Story