ಕುತೂಹಲ ಸೃಷ್ಟಿಸಿದ ಬಿಎಸ್ವೈ ಭೇಟಿ ಬಗ್ಗೆ ಪ್ರಕಾಶ್ ಹುಕ್ಕೇರಿ ಪ್ರತಿಕ್ರಿಯಿಸಿದ್ದು ಹೀಗೆ...
ಬೆಳಗಾವಿ, ನ. 24: ಮಹತ್ವದ ಬೆಳವಣಿಗೆಯೊಂದರಲ್ಲಿ ಜಿಲ್ಲೆಯ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಪ್ರಕಾಶ್ ಹುಕ್ಕೇರಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿ ಕುತೂಹಲ ಸೃಷ್ಟಿಸಿದ್ದಾರೆ.
ರವಿವಾರ ಬೆಳಗ್ಗೆ ನಗರದ ಖಾಸಗಿ ಹೊಟೇಲ್ನಲ್ಲಿ ಸಿಎಂ ಬಿಎಸ್ವೈ ಅವರನ್ನು ಭೇಟಿ ಮಾಡಿದ ಪ್ರಕಾಶ್ ಹುಕ್ಕೇರಿ ಅರ್ಧ ಗಂಟೆಗೂ ಹೆಚ್ಚು ಕಾಲ ಅವರೊಂದಿಗೆ ಸಮಾಲೋಚನೆ ನಡೆಸಿರುವುದು ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ.
ರಾಜಕೀಯ ಚರ್ಚೆ ಮಾಡಿಲ್ಲ: ಹೊಟೇಲ್ಗೆ ಉಪಹಾರಕ್ಕಾಗಿ ಬಂದಿದ್ದೆ. ಇದೇ ವೇಳೇ ಚಿಕ್ಕೋಡಿ ಭಾಗದಲ್ಲಿ ನೆರೆ ಸಂತ್ರಸ್ತರಿಗೆ ಸಮರ್ಪಕವಾಗಿ ಪರಿಹಾರ ಸಿಕ್ಕಿಲ್ಲ. ಮನೆ ಹಾನಿ ಪರಿಹಾರ ನೀಡಲು ಸಿದ್ಧಪಡಿಸಿದ ಪಟ್ಟಿಯಲ್ಲಿ ಬಹಳ ಮಂದಿಯ ಹೆಸರು ಬಿಟ್ಟು ಹೋಗಿವೆ. ಹೀಗಾಗಿ ಮನವಿ ಸಲ್ಲಿಸಲು ಆಗಮಿಸಿದ್ದೆ. ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ನಾನು ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಪ್ರಕಾಶ್ ಹುಕ್ಕೇರಿ ಸ್ಪಷ್ಟಣೆ ನೀಡಿದರು.
Next Story