ಡಾ.ವಿಜಯಾ ಅವರ ‘ಕುದಿ ಎಸರು’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಬೆಂಗಳೂರು, ಡಿ. 18: ಖ್ಯಾತ ಲೇಖಕಿ ಡಾ.ವಿಜಯಾ ಅವರ ‘ಕುದಿ ಎಸರು-ತಿಟ್ಹತ್ತಿ ತಿರುಗಿ ನೋಡಿದಾಗ’ ಆತ್ಮಚರಿತ್ರೆ ಕೃತಿಗೆ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
2019ನೆ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟಿಸಿದ್ದು, ಕನ್ನಡ ಭಾಷೆ ವಿಭಾಗದಲ್ಲಿ ವಿಜಯಾ ಅವರ ‘ಕುದಿ ಎಸರು’ ಕೃತಿ ಆಯ್ಕೆಯಾಗಿದೆ. ಪ್ರಶಸ್ತಿಯು 1ಲಕ್ಷ ರೂ.ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ ಎಂದು ಅಕಾಡೆಮಿ ತಿಳಿಸಿದೆ.
ಭಾರತದ ಒಟ್ಟು 24 ಭಾಷೆಗಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಈ ಬಾರಿ ನೇಪಾಳಿ ಭಾಷೆ ಹೊರತುಪಡಿಸಿ 23 ಭಾಷೆಗಳಿಗೆ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದ್ದು, ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ ಎಂದು ಕೇಂದ್ರ ಸಾಹಿತ್ಯ ಅಕಾದೆಮಿಯ ಪ್ರಕಟಣೆ ತಿಳಿಸಿದೆ.
Next Story