ಡಿ.29ರಂದು ಶಾಲೆ-ಕಾಲೇಜುಗಳಲ್ಲಿ ವಿಶ್ವ ಮಾನವ ದಿನಾಚರಣೆ
ಬೆಂಗಳೂರು, ಡಿ.27: ರಾಷ್ಟ್ರಕವಿ ಕುವೆಂಪು ಜನ್ಮದಿನವಾದ ಡಿ.29ರಂದು ರಾಜ್ಯದ ಎಲ್ಲ ಶಾಲೆ-ಕಾಲೇಜುಗಳಲ್ಲಿ ವಿಶ್ವ ಮಾನವ ದಿನಾಚರಣೆಯಾಗಿ ಆಚರಿಸಬೇಕು ಹಾಗೂ ವಿಶ್ವಮಾನವ ಸಂದೇಶ ಕುರಿತ ವಿಚಾರಗೋಷ್ಟಿಗಳನ್ನು ಆಯೋಜಿಸಲು ಶಿಕ್ಷಣ ಇಲಾಖೆ ಆದೇಶಿಸಿದೆ.
ರಾಜ್ಯದ ವಿದ್ಯಾರ್ಥಿಗಳಿಗೆ ರಾಷ್ಟ್ರಕವಿ ಕುವೆಂಪುರವರ ಚಿಂತನೆಗಳನ್ನು ತಿಳಿಸುವ ಉದ್ದೇಶದಿಂದ ವಿಶ್ವಮಾನವ ದಿನಾಚರಣೆಯನ್ನು ಆಚರಿಸಲು ಸೂಚಿಸಲಾಗಿದೆ. ಇದರಲ್ಲಿ ಶಾಲಾ-ಕಾಲೇಜಿನ ಶಿಕ್ಷಕರು ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story