Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಪಿಸಿಸಿ ಅಧ್ಯಕ್ಷರ ನೇಮಕ ಬಗ್ಗೆ ದಿನೇಶ್...

ಕೆಪಿಸಿಸಿ ಅಧ್ಯಕ್ಷರ ನೇಮಕ ಬಗ್ಗೆ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ24 Jan 2020 11:05 PM IST
share
ಕೆಪಿಸಿಸಿ ಅಧ್ಯಕ್ಷರ ನೇಮಕ ಬಗ್ಗೆ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ

ಮೈಸೂರು,ಜ.24: ಸಮಾಜದಲ್ಲಿ ಶಾಂತಿ, ನೆಮ್ಮದಿ ಇಲ್ಲದ ಕಾರಣಕ್ಕಾಗಿಯೇ ದೇಶದಲ್ಲಿ ಇಷ್ಟೊಂದು ಸಮಸ್ಯೆ ಉದ್ಭವವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಸುತ್ತೂರಿನಲ್ಲಿ ನಡೆಯುತ್ತಿರುವ  ಜಾತ್ರಾ ಮಹೋತ್ಸವದ ನಾಲ್ಕನೇ ದಿನವಾದ ಇಂದು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಸುತ್ತೂರು ಜಾತ್ರಗೆ ಪ್ರತಿವರ್ಷವೂ ಸ್ವಾಮೀಜಿಯವರು ಕರೆಯುತ್ತಾರೆ. ಈ ವರ್ಷವೂ ಕರೆದಿದ್ದಾರೆ. ಅದಕ್ಕಾಗಿಯೇ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದೇನೆ ಎಂದರು. ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ತಡವಾಗುತ್ತಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ ಖಂಡಿತವಾಗಿಯೂ ಆದಷ್ಟು ಬೇಗ ಇತ್ಯರ್ಥವಾಗುವ ಅವಶ್ಯಕತೆಯಿದೆ. ನಾನೂ ಕೂಡ ವರಿಷ್ಠರ ಜೊತೆ ಮಾತನಾಡಿದ್ದೇನೆ. ಬಹುಶಃ ಮುಂದಿನ ವಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್ ಅವರನ್ನು ದೂರ ಇಡುವ ಉದ್ದೇಶಾನಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರಾಗಬೇಕು ಅನ್ನೋದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಯಾವುದೇ ಅಭಿಪ್ರಾಯ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆ ಆಗಬೇಕು, ಆಗುತ್ತಿದೆ. ಎಲ್ಲರ ಬಗ್ಗೆಯೂ ಪರ-ವಿರೋಧ ಅಭಿಪ್ರಾಯವಿರತ್ತದೆ. ಅದು ಸಹಜ. ಅಂತಿಮ ತೀರ್ಮಾನವನ್ನು ಹೈಕಮಾಂಡ್ ಮಾಡುತ್ತದೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದರು.

ನಾಲ್ಕು ಮಂದಿ ಕಾರ್ಯಾಧ್ಯಕ್ಷರಾಗುತ್ತಿರುವುದು ನಿಜಾನಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದೆಲ್ಲ ಊಹಾಪೋಹ. ಅಧಿಕೃತವಾಗಿ ಯಾರೂ ಹೇಳಿಲ್ಲ. ಕಾರ್ಯಾಧ್ಯಕ್ಷರು ಹಿಂದೆ ಎಲ್ಲರೂ ಆಗಿದ್ದಾರೆ, ನಾನು ಆಗಿದ್ದೆ, ಶಿವಕುಮಾರ್ ಆಗಿದ್ದರು. ಎಸ್.ಆರ್.ಪಾಟೀಲ್ ಆಗಿದ್ದರು. ಇದು ಹೊಸದೇನಲ್ಲ. ಈ ಚರ್ಚೆಗಳು ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆ ಆಗತಕ್ಕಂತದ್ದೇ ಹೊರತು ಯಾರೂ ಅಧಿಕೃತವಾಗಿ ಹೇಳಿಲ್ಲ. ಈ ಸುದ್ದಿ ಎಲ್ಲಿಂದ ಬಂತೋ ಗೊತ್ತಿಲ್ಲ. ಈ ವಿಚಾರ ಬಹಿರಂಗವಾಗಿ ಚರ್ಚೆಯಾಗುವ ಅವಶ್ಯಕತೆಯಿಲ್ಲ ಎಂದರು.

ಜಾತ್ಯಾತೀತ ವ್ಯವಸ್ಥೆಯಲ್ಲಿ ನಾವಿರಬೇಕು. ಧರ್ಮ, ಜಾತಿ ಆಧಾರಿತವಾಗಿರದೇ ವಿಭಿನ್ನವಾಗಿರಬೇಕು. ಎಲ್ಲರನ್ನೂ ಒಂದೇ ರೀತಿಯಲ್ಲಿ ತಗೊಂಡು ಹೋಗುವ ಕೆಲಸವಾಗಬೇಕು. ಸಮಾಜದಲ್ಲಿ ಶಾಂತಿ ನೆಮ್ಮದಿ ಇಲ್ಲ. ದೇಶದಲ್ಲಿ ಅದಕ್ಕಾಗಿಯೇ ಇಷ್ಟೊಂದು ಸಮಸ್ಯೆಗಳು ಉದ್ಭವವಾಗಿದೆ ಎಂದರು.

ಮಂಗಳೂರು ಬಾಂಬ್ ಪ್ರಕರಣಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಹೇಗೆ ಅಂದರೆ ಮುಸ್ಲಿಮರು ಯಾರಾದರೂ ಇದ್ದರೆ ಎಲ್ಲರೂ ಬೀದಿಗೆ ಬಂದು ಬಿಡುತ್ತಾರೆ. ಶೋಭಾ ಕರಂದ್ಲಾಜೆ, ಸಿ.ಟಿ ರವಿ, ಟ್ವೀಟ್ ಮೇಲೆ ಟ್ವೀಟ್ ಮಾಡುತ್ತಾರೆ. ಈಗ ಆದಿತ್ಯರಾವ್ ಹೆಸರು ಬಂದ ಕಾರಣ ಅದಕ್ಕೆ ಮಾನಸಿಕ ಅಸ್ವಸ್ಥ ಇರಬೇಕು. ಅವನಿಗೆ ಬೇರೇ ಏನೋ ಅಗಿರಬೇಕು ಅಂತ ಅವರೇ ಹೇಳಿದರು. ತನಿಖೆ ಇನ್ನೂ ಮುಗಿದಿಲ್ಲ. ಎಷ್ಟಿದೆ ನೋಡಿ ವ್ಯತ್ಯಾಸ. ಅವರ ನಡವಳಿಕೆನೇ ಬೇರೆ. ತಪ್ಪು ಯಾರೇ ಮಾಡಿರಲಿ. ಯಾರನ್ನೂ ರಕ್ಷಿಸಬಾರದು. ಇಂತಹ ಕೃತ್ಯಗಳಿಗೆ ಅವರು ಯಾರೇ ಅಗಿರಲಿ ಕ್ರಮ ವಹಿಸುವುದು ಮುಖ್ಯ. ರಾಜಕೀಯ ಬಣ್ಣ ಕಟ್ಟಲು ಹೋದರೆ ಒಳ್ಳೆಯದಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X