ಜ.30ರಂದು ಭೀಮ್ ಆರ್ಮಿಯ ಚಂದ್ರಶೇಖರ್ ಆಝಾದ್ ಉಡುಪಿಗೆ
ಬೆಂಗಳೂರು, ಜ.25: ಭೀಮ್ ಆರ್ಮಿ ಸಂಸ್ಥಾಪಕ ಅಧ್ಯಕ್ಷ ಚಂದ್ರಶೇಖರ್ ಆಝಾದ್ ರಾವಣ್ ಅವರು ಜ.28 ರಿಂದ 30ರವೆರೆಗೆ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಭೀಮ್ ಆರ್ಮಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ್ಗೋಪಾಲ್ ತಿಳಿಸಿದ್ದಾರೆ.
ಶನಿವಾರ ಪ್ರೆಸ್ ಕ್ಲಬ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.28 ರಂದು ಬೆಳಗ್ಗೆ 11ಕ್ಕೆ ಬೀದರ್ನಲ್ಲಿ ಭಾರತದ ಸಂವಿಧಾನದ ಮೂಲ ಆಶಯ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಲಬುರ್ಗಿಯಲ್ಲಿ ಸಂಜೆ 5ಕ್ಕೆ ಭೀಮ ಸಂಕಲ್ಪ ಸಮಾವೇಶವನ್ನು ಆಯೋಜಿಸಲಾಗಿದೆ. ಜ.29ರಂದು ಸಂಜೆ 5ಕ್ಕೆ ಬೆಂಗಳೂರಿನ ಸೆನೆಟ್ ಹಾಲ್ ನಲ್ಲಿ ಗೌರಿ ನೆನಪು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜ.30ರಂದು ಮಧ್ಯಾಹ್ನ 3ಕ್ಕೆ ಉಡುಪಿಯಲ್ಲಿ ಎನ್ಆರ್ಸಿ ಕುರಿತು ಚರ್ಚಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಎಲ್ಲ ಸಮಾವೇಶಗಳಲ್ಲೂ ಚಂದ್ರಶೇಖರ್ ಆಝಾದ್ ರಾವಣ್ ಅವರು ಭಾಗವಹಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.
Next Story