ಆನಂದ್ ಸಿಂಗ್ ಅರಣ್ಯ ಖಾತೆ ರದ್ದುಗೊಳಿಸಲು ಅರ್ಜಿ ಕಾನೂನು ಬದ್ಧವಾಗಿಲ್ಲ: ಹೈಕೋರ್ಟ್
ಬೆಂಗಳೂರು, ಫೆ.25: ಸಚಿವ ಆನಂದ್ ಸಿಂಗ್ ಅವರಿಗೆ ನೀಡಿರುವ ಅರಣ್ಯ ಖಾತೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಅರ್ಜಿ ಕಾನೂನು ಬದ್ಧವಾಗಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.
ಆನಂದ್ ಸಿಂಗ್ ವಿರುದ್ಧ ವಕೀಲ ವಿಜಯ್ ಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಆನಂದ್ ಸಿಂಗ್ ಕುಟುಂಬ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದು, ಇವರ ವಿರುದ್ಧ ಹಲವು ಕ್ರಿಮಿನಲ್ ಕೇಸ್ಗಳಿವೆ. ಹೀಗಾಗಿ, ಅರಣ್ಯ ಖಾತೆಯನ್ನು ರದ್ದುಗೊಳಿಸಬೇಕೆಂದು ಅರ್ಜಿ ಸಲ್ಲಿಕೆಯಾಗಿತ್ತು.
Next Story